ರಾಜಕೀಯ

ಹೈಕಮಾಂಡ್ ಮೇಲೆ ಮುನಿಸಿಕೊಂಡಿದ್ದು ನಿಜ : ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಆರು ತಿಂಗಳುಗಳು ಕಳೆದರೂ ಕೂಡ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿದ್ದುದ್ದರ ಕುರಿತು ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ತಮಗೆ ಹೈಕಮಾಂಡ್ ಮೇಲಿದ್ದ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಇದೀಗ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ಮಾಡಿದೆ. ಈ ಕೆಲಸವನ್ನು ಮೂರು ತಿಂಗಳ ಮುಂಚೆಯೇ ಮಾಡಬೇಕಿತ್ತು. ಆಗಲೇ ವಿಪಕ್ಷ ನಾಯಕನನ್ನು ನೇಮಕ ಮಾಡಿದ್ದರೆ ಬಿಜೆಪಿ ಪಕ್ಷ ಇನ್ನು ಶಕ್ತಿಯುತವಾಗಿರುತ್ತಿತ್ತು. ಈ ವಿಳಂಬ ನೀತಿಯ ಕುರಿತು ನನಗೆ ಅಸಮಾಧಾನವಿತ್ತು ಆದರೆ ಈಗ ಅದು ಶಮನವಾಗಿದೆ ಎಂದಿದ್ದಾರೆ.

 ಅಶೋಕ್ ಅವರು ವಿಪಕ್ಷ ನಾಯಕನಾಗಿರುವುದು ಸಂತಸದ ಸಂಗತಿ. ಅವರೊಂದಿಗೆ ನಾವೆಲ್ಲರೂ ಒಗ್ಗಟ್ಟಾಗಿ ಪಕ್ಷಕ್ಕಾಗಿ ದುಡಿಯುತ್ತೇವೆ. ವಿಪಕ್ಷ ನಾಯಕರಾದ ಆರ್.ಅಶೋಕ್ ಹಾಗೂ ರಾಜ್ಯಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರು ಎಲ್ಲರ ವಿಶ್ವಾಸವನ್ನು ಗಳಿಸುವ ಕೆಲಸ ಮಾಡುತ್ತಿದ್ದಾರೆ. ಪಕ್ಷದ ಆಂತರಿಕ ಗೊಂದಲ ನಿಭಾಯಿಸುವ ಶಕ್ತಿ ಇವರಿಬ್ಬರಿಗಿದೆ ಎಂದು ಹೇಳಿದ್ದಾರೆ.

ಆರ್. ಅಶೋಕ್ ಅವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆಗಳಿವೆ. ಮುಂದೊಂದು ದಿನ ಅವರು ಮುಖ್ಯಮಂತ್ರಿಗಳಾಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ವಿಪಕ್ಷ ನಾಯಕನಾಗಿ ಆಯ್ಕೆಯಾದ ನಂತರ ಅಶೋಕ್ ಅವರು ಅಸಮಾಧಾನಿಕ ನಾಯಕರ ಮುನಿಸನ್ನು ಶಮನ ಮಾಡಲು ಮುಂದಾಗಿದ್ದಾರೆ. ಜಿಲ್ಲಾ ಪ್ರವಾಸ ಕೈಗೊಳ್ಳುವುದರ ಜೊತೆಗೆ ನಾಯಕರನ್ನು ಸಮಾಧಾನ ಮಾಡಲು ಮುಂದಾಗಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರ ನಿವಾಸಕ್ಕೂ ಕೂಡ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

lokesh

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

15 hours ago