ರಾಜಕೀಯ

ಮೂವರು ರೆಬೆಲ್‌ ಶಾಸಕರಿಗೆ ನೂತನ ಹುದ್ದೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ ನಿಗಮ ಮಂಡಳಿ ನೇಮಕ ಇನ್ನೂ ಘೋಷಣೆಯಾಗದೆಯೇ ಉಳಿದುಕೊಂಡಿದ್ದು, ಇದರ ಕುರಿತಾದ ಚರ್ಚೆಗಳು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ರೆಬೆಲ್‌ ಶಾಸಕರಿಗೆ ನೂತನ ಹುದ್ದೆಗಳನ್ನು ನಿರ್ಮಿಸಿದ್ದಾರೆ.

ಸಚಿವ ಸ್ಥಾನ ಸಿಗದೇ ಬೇಸರಕ್ಕೊಳಗಾಗಿ ರೆಬೆಲ್‌ ಆಗಿದ್ದ ಮೂವರು ಹಿರಿಯ ಶಾಸಕರಾ ಆರ್‌ವಿ ದೇಶಪಾಂಡೆ, ಬಿಆರ್‌ ಪಾಟೀಲ್‌ ಹಾಗೂ ಬಸವರಾಜ್‌ ರಾಯರೆಡ್ಡಿಗೆ ಸಿದ್ದರಾಮಯ್ಯ ಹೊಸ ಹುದ್ದೆಗಳನ್ನು ನೀಡುವುದರ ಜತೆಗೆ ಸಂಪುಟ ದರ್ಜೆ ಸ್ಥಾನಮಾನವನ್ನೂ ಸಹ ನೀಡಿದ್ದಾರೆ.

ಕೊಪ್ಪಳ ಜಿಲ್ಲೆಯ ಉಲಬರ್ಗಾ ಶಾಸಕ ಬಸವರಾಜ್‌ ರಾಯರೆಡ್ಡಿಗೆ ಮುಖ್ಯಮಂತ್ರಿಗೆ ಆರ್ಥಿಕ ಸಲಹೆಗಾರನನ್ನಾಗಿ ನೇಮಿಸಲಾಗಿದ್ದು, ಕಲಬುರಗಿ ಆಳಂದ ಕ್ಷೇತ್ರದ ಶಾಸಕ ಬಿಆರ್‌ ಪಾಟೀಲ್‌ ಸಲಹೆಗಾರನನ್ನಾಗಿ ನೇಮಿಸಲಾಗಿದೆ. ಇನ್ನು ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕ ಆರ್‌ವಿ ದೇಶಪಾಂಡೆಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರ ಜತೆಗೆ ಈ ಮೂವರಿಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಲಭಿಸಿದೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago