ಕಾಂಗ್ರೆಸ್ ನಿಗಮ ಮಂಡಳಿ ನೇಮಕ ಇನ್ನೂ ಘೋಷಣೆಯಾಗದೆಯೇ ಉಳಿದುಕೊಂಡಿದ್ದು, ಇದರ ಕುರಿತಾದ ಚರ್ಚೆಗಳು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ರೆಬೆಲ್ ಶಾಸಕರಿಗೆ ನೂತನ ಹುದ್ದೆಗಳನ್ನು ನಿರ್ಮಿಸಿದ್ದಾರೆ.
ಸಚಿವ ಸ್ಥಾನ ಸಿಗದೇ ಬೇಸರಕ್ಕೊಳಗಾಗಿ ರೆಬೆಲ್ ಆಗಿದ್ದ ಮೂವರು ಹಿರಿಯ ಶಾಸಕರಾ ಆರ್ವಿ ದೇಶಪಾಂಡೆ, ಬಿಆರ್ ಪಾಟೀಲ್ ಹಾಗೂ ಬಸವರಾಜ್ ರಾಯರೆಡ್ಡಿಗೆ ಸಿದ್ದರಾಮಯ್ಯ ಹೊಸ ಹುದ್ದೆಗಳನ್ನು ನೀಡುವುದರ ಜತೆಗೆ ಸಂಪುಟ ದರ್ಜೆ ಸ್ಥಾನಮಾನವನ್ನೂ ಸಹ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಉಲಬರ್ಗಾ ಶಾಸಕ ಬಸವರಾಜ್ ರಾಯರೆಡ್ಡಿಗೆ ಮುಖ್ಯಮಂತ್ರಿಗೆ ಆರ್ಥಿಕ ಸಲಹೆಗಾರನನ್ನಾಗಿ ನೇಮಿಸಲಾಗಿದ್ದು, ಕಲಬುರಗಿ ಆಳಂದ ಕ್ಷೇತ್ರದ ಶಾಸಕ ಬಿಆರ್ ಪಾಟೀಲ್ ಸಲಹೆಗಾರನನ್ನಾಗಿ ನೇಮಿಸಲಾಗಿದೆ. ಇನ್ನು ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕ ಆರ್ವಿ ದೇಶಪಾಂಡೆಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರ ಜತೆಗೆ ಈ ಮೂವರಿಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಲಭಿಸಿದೆ.
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…