ಕಾಂಗ್ರೆಸ್ ನಿಗಮ ಮಂಡಳಿ ನೇಮಕ ಇನ್ನೂ ಘೋಷಣೆಯಾಗದೆಯೇ ಉಳಿದುಕೊಂಡಿದ್ದು, ಇದರ ಕುರಿತಾದ ಚರ್ಚೆಗಳು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ರೆಬೆಲ್ ಶಾಸಕರಿಗೆ ನೂತನ ಹುದ್ದೆಗಳನ್ನು ನಿರ್ಮಿಸಿದ್ದಾರೆ.
ಸಚಿವ ಸ್ಥಾನ ಸಿಗದೇ ಬೇಸರಕ್ಕೊಳಗಾಗಿ ರೆಬೆಲ್ ಆಗಿದ್ದ ಮೂವರು ಹಿರಿಯ ಶಾಸಕರಾ ಆರ್ವಿ ದೇಶಪಾಂಡೆ, ಬಿಆರ್ ಪಾಟೀಲ್ ಹಾಗೂ ಬಸವರಾಜ್ ರಾಯರೆಡ್ಡಿಗೆ ಸಿದ್ದರಾಮಯ್ಯ ಹೊಸ ಹುದ್ದೆಗಳನ್ನು ನೀಡುವುದರ ಜತೆಗೆ ಸಂಪುಟ ದರ್ಜೆ ಸ್ಥಾನಮಾನವನ್ನೂ ಸಹ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಉಲಬರ್ಗಾ ಶಾಸಕ ಬಸವರಾಜ್ ರಾಯರೆಡ್ಡಿಗೆ ಮುಖ್ಯಮಂತ್ರಿಗೆ ಆರ್ಥಿಕ ಸಲಹೆಗಾರನನ್ನಾಗಿ ನೇಮಿಸಲಾಗಿದ್ದು, ಕಲಬುರಗಿ ಆಳಂದ ಕ್ಷೇತ್ರದ ಶಾಸಕ ಬಿಆರ್ ಪಾಟೀಲ್ ಸಲಹೆಗಾರನನ್ನಾಗಿ ನೇಮಿಸಲಾಗಿದೆ. ಇನ್ನು ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕ ಆರ್ವಿ ದೇಶಪಾಂಡೆಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರ ಜತೆಗೆ ಈ ಮೂವರಿಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಲಭಿಸಿದೆ.
ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…
ಬೀದರ್: 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್ಐಆರ್…
ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…
ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…
ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…
2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…