ಕಾಂಗ್ರೆಸ್ ನಿಗಮ ಮಂಡಳಿ ನೇಮಕ ಇನ್ನೂ ಘೋಷಣೆಯಾಗದೆಯೇ ಉಳಿದುಕೊಂಡಿದ್ದು, ಇದರ ಕುರಿತಾದ ಚರ್ಚೆಗಳು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ರೆಬೆಲ್ ಶಾಸಕರಿಗೆ ನೂತನ ಹುದ್ದೆಗಳನ್ನು ನಿರ್ಮಿಸಿದ್ದಾರೆ.
ಸಚಿವ ಸ್ಥಾನ ಸಿಗದೇ ಬೇಸರಕ್ಕೊಳಗಾಗಿ ರೆಬೆಲ್ ಆಗಿದ್ದ ಮೂವರು ಹಿರಿಯ ಶಾಸಕರಾ ಆರ್ವಿ ದೇಶಪಾಂಡೆ, ಬಿಆರ್ ಪಾಟೀಲ್ ಹಾಗೂ ಬಸವರಾಜ್ ರಾಯರೆಡ್ಡಿಗೆ ಸಿದ್ದರಾಮಯ್ಯ ಹೊಸ ಹುದ್ದೆಗಳನ್ನು ನೀಡುವುದರ ಜತೆಗೆ ಸಂಪುಟ ದರ್ಜೆ ಸ್ಥಾನಮಾನವನ್ನೂ ಸಹ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಉಲಬರ್ಗಾ ಶಾಸಕ ಬಸವರಾಜ್ ರಾಯರೆಡ್ಡಿಗೆ ಮುಖ್ಯಮಂತ್ರಿಗೆ ಆರ್ಥಿಕ ಸಲಹೆಗಾರನನ್ನಾಗಿ ನೇಮಿಸಲಾಗಿದ್ದು, ಕಲಬುರಗಿ ಆಳಂದ ಕ್ಷೇತ್ರದ ಶಾಸಕ ಬಿಆರ್ ಪಾಟೀಲ್ ಸಲಹೆಗಾರನನ್ನಾಗಿ ನೇಮಿಸಲಾಗಿದೆ. ಇನ್ನು ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕ ಆರ್ವಿ ದೇಶಪಾಂಡೆಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರ ಜತೆಗೆ ಈ ಮೂವರಿಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಲಭಿಸಿದೆ.
ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್ ಕಿಟ್ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (WPL) ಟಿ20 ಕ್ರಿಕೆಟ್ ಟೂನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್ ಅವರು 2023ರ ಜೂನ್ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ. ರಾಜ್ಯ…
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…
ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…