ರಾಜಕೀಯ

ಮೂವರು ರೆಬೆಲ್‌ ಶಾಸಕರಿಗೆ ನೂತನ ಹುದ್ದೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ ನಿಗಮ ಮಂಡಳಿ ನೇಮಕ ಇನ್ನೂ ಘೋಷಣೆಯಾಗದೆಯೇ ಉಳಿದುಕೊಂಡಿದ್ದು, ಇದರ ಕುರಿತಾದ ಚರ್ಚೆಗಳು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ರೆಬೆಲ್‌ ಶಾಸಕರಿಗೆ ನೂತನ ಹುದ್ದೆಗಳನ್ನು ನಿರ್ಮಿಸಿದ್ದಾರೆ.

ಸಚಿವ ಸ್ಥಾನ ಸಿಗದೇ ಬೇಸರಕ್ಕೊಳಗಾಗಿ ರೆಬೆಲ್‌ ಆಗಿದ್ದ ಮೂವರು ಹಿರಿಯ ಶಾಸಕರಾ ಆರ್‌ವಿ ದೇಶಪಾಂಡೆ, ಬಿಆರ್‌ ಪಾಟೀಲ್‌ ಹಾಗೂ ಬಸವರಾಜ್‌ ರಾಯರೆಡ್ಡಿಗೆ ಸಿದ್ದರಾಮಯ್ಯ ಹೊಸ ಹುದ್ದೆಗಳನ್ನು ನೀಡುವುದರ ಜತೆಗೆ ಸಂಪುಟ ದರ್ಜೆ ಸ್ಥಾನಮಾನವನ್ನೂ ಸಹ ನೀಡಿದ್ದಾರೆ.

ಕೊಪ್ಪಳ ಜಿಲ್ಲೆಯ ಉಲಬರ್ಗಾ ಶಾಸಕ ಬಸವರಾಜ್‌ ರಾಯರೆಡ್ಡಿಗೆ ಮುಖ್ಯಮಂತ್ರಿಗೆ ಆರ್ಥಿಕ ಸಲಹೆಗಾರನನ್ನಾಗಿ ನೇಮಿಸಲಾಗಿದ್ದು, ಕಲಬುರಗಿ ಆಳಂದ ಕ್ಷೇತ್ರದ ಶಾಸಕ ಬಿಆರ್‌ ಪಾಟೀಲ್‌ ಸಲಹೆಗಾರನನ್ನಾಗಿ ನೇಮಿಸಲಾಗಿದೆ. ಇನ್ನು ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕ ಆರ್‌ವಿ ದೇಶಪಾಂಡೆಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರ ಜತೆಗೆ ಈ ಮೂವರಿಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಲಭಿಸಿದೆ.

andolana

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

2 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

2 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

2 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

2 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago