ರಾಜಕೀಯ

ಭೇಟಿಯಾಗದ ಅಮಿತ್‌ ಶಾ; ಶಿವಮೊಗ್ಗದಿಂದ ಈಶ್ವರಪ್ಪ ಸ್ಪರ್ಧೆ ಖಚಿತ?

ಹೊಸದಿಲ್ಲಿ: ತಮ್ಮ ಪುತ್ರನಿಗೆ ಈ ಬಾರಿಯ ಲೋಕಸಭೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಗದ ಕಾರಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡು ಬಂಡಾಯ ಸಾರಿರುವ ಕೆ.ಎಸ್‌ ಈಶ್ವರಪ್ಪ ವಿರುದ್ಧ ಮೊನ್ನೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್‌ ಶಾಗೆ ದೂರನ್ನು ನೀಡಲಾಗಿತ್ತು.

ಇನ್ನು ಈಶ್ವರಪ್ಪ ಅವರನ್ನು ಭೇಟಿಯಾಗಲು ಅಮಿತ್‌ ಶಾ ತೀರ್ಮಾನಿಸಿದ್ದು, ನಿನ್ನೆ ( ಏಪ್ರಿಲ್‌ 3 ) ಭೇಟಿಯಾಗುವುದಾಗಿ ಸೂಚಿಸಿದ್ದರು. ಅದರಂತೆ ನಿನ್ನೆ ಸಂಜೆ ಈಶ್ವರಪ್ಪ ದೆಹಲಿ ತಲುಪಿದ್ದರು. ರಾತ್ರಿ 10ರ ಬಳಿಕ ಸಮಯ ನಿಗದಿಯಾಗಿತ್ತು ಎಂದು ಮೂಲಗಳು ತಿಳಿಸಿದ್ದವು.

ಆದರೆ ಬಳಿಕ ಅಮಿತ್‌ ಶಾ ಭೇಟಿಯಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು ಈಶ್ವರಪ್ಪ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ʼಇಂದು ರಾತ್ರಿ 10 ಗಂಟೆಯ ಬಳಿಕ ಅಮಿತ್‌ ಶಾ ಅವರನ್ನು ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ, ಅಮಿತ್‌ ಶಾ ಅವರು ಭೇಟಿಗೆ ಲಭ್ಯವಿರುವುದಿಲ್ಲ ಎಂಬ ಮಾಹಿತಿ ಬಂದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಲೋಕಸಭೆ ಚುನಾವಣೆಯಲ್ಲಿ ಸೋಲಲಿ ಎನ್ನುವ ಅಪೇಕ್ಷೆ ಕೇಂದ್ರ ಸಚಿವ ಅಮಿತ್‌ ಶಾ ಅವರಿಗೆ ಇರಬಹುದುʼ ಎಂದು ಹೇಳಿಕೆ ನೀಡಿ ಶಿವಮೊಗ್ಗದಿಂದ ಸ್ಪರ್ಧೆ ಖಚಿತ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.

andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

7 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

7 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

8 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

8 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

8 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

8 hours ago