ರಾಜಕೀಯ

ಭೇಟಿಯಾಗದ ಅಮಿತ್‌ ಶಾ; ಶಿವಮೊಗ್ಗದಿಂದ ಈಶ್ವರಪ್ಪ ಸ್ಪರ್ಧೆ ಖಚಿತ?

ಹೊಸದಿಲ್ಲಿ: ತಮ್ಮ ಪುತ್ರನಿಗೆ ಈ ಬಾರಿಯ ಲೋಕಸಭೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಗದ ಕಾರಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡು ಬಂಡಾಯ ಸಾರಿರುವ ಕೆ.ಎಸ್‌ ಈಶ್ವರಪ್ಪ ವಿರುದ್ಧ ಮೊನ್ನೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್‌ ಶಾಗೆ ದೂರನ್ನು ನೀಡಲಾಗಿತ್ತು.

ಇನ್ನು ಈಶ್ವರಪ್ಪ ಅವರನ್ನು ಭೇಟಿಯಾಗಲು ಅಮಿತ್‌ ಶಾ ತೀರ್ಮಾನಿಸಿದ್ದು, ನಿನ್ನೆ ( ಏಪ್ರಿಲ್‌ 3 ) ಭೇಟಿಯಾಗುವುದಾಗಿ ಸೂಚಿಸಿದ್ದರು. ಅದರಂತೆ ನಿನ್ನೆ ಸಂಜೆ ಈಶ್ವರಪ್ಪ ದೆಹಲಿ ತಲುಪಿದ್ದರು. ರಾತ್ರಿ 10ರ ಬಳಿಕ ಸಮಯ ನಿಗದಿಯಾಗಿತ್ತು ಎಂದು ಮೂಲಗಳು ತಿಳಿಸಿದ್ದವು.

ಆದರೆ ಬಳಿಕ ಅಮಿತ್‌ ಶಾ ಭೇಟಿಯಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು ಈಶ್ವರಪ್ಪ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ʼಇಂದು ರಾತ್ರಿ 10 ಗಂಟೆಯ ಬಳಿಕ ಅಮಿತ್‌ ಶಾ ಅವರನ್ನು ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ, ಅಮಿತ್‌ ಶಾ ಅವರು ಭೇಟಿಗೆ ಲಭ್ಯವಿರುವುದಿಲ್ಲ ಎಂಬ ಮಾಹಿತಿ ಬಂದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಲೋಕಸಭೆ ಚುನಾವಣೆಯಲ್ಲಿ ಸೋಲಲಿ ಎನ್ನುವ ಅಪೇಕ್ಷೆ ಕೇಂದ್ರ ಸಚಿವ ಅಮಿತ್‌ ಶಾ ಅವರಿಗೆ ಇರಬಹುದುʼ ಎಂದು ಹೇಳಿಕೆ ನೀಡಿ ಶಿವಮೊಗ್ಗದಿಂದ ಸ್ಪರ್ಧೆ ಖಚಿತ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

20 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago