ರಾಜಕೀಯ

ಭೇಟಿಯಾಗದ ಅಮಿತ್‌ ಶಾ; ಶಿವಮೊಗ್ಗದಿಂದ ಈಶ್ವರಪ್ಪ ಸ್ಪರ್ಧೆ ಖಚಿತ?

ಹೊಸದಿಲ್ಲಿ: ತಮ್ಮ ಪುತ್ರನಿಗೆ ಈ ಬಾರಿಯ ಲೋಕಸಭೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಗದ ಕಾರಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡು ಬಂಡಾಯ ಸಾರಿರುವ ಕೆ.ಎಸ್‌ ಈಶ್ವರಪ್ಪ ವಿರುದ್ಧ ಮೊನ್ನೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್‌ ಶಾಗೆ ದೂರನ್ನು ನೀಡಲಾಗಿತ್ತು.

ಇನ್ನು ಈಶ್ವರಪ್ಪ ಅವರನ್ನು ಭೇಟಿಯಾಗಲು ಅಮಿತ್‌ ಶಾ ತೀರ್ಮಾನಿಸಿದ್ದು, ನಿನ್ನೆ ( ಏಪ್ರಿಲ್‌ 3 ) ಭೇಟಿಯಾಗುವುದಾಗಿ ಸೂಚಿಸಿದ್ದರು. ಅದರಂತೆ ನಿನ್ನೆ ಸಂಜೆ ಈಶ್ವರಪ್ಪ ದೆಹಲಿ ತಲುಪಿದ್ದರು. ರಾತ್ರಿ 10ರ ಬಳಿಕ ಸಮಯ ನಿಗದಿಯಾಗಿತ್ತು ಎಂದು ಮೂಲಗಳು ತಿಳಿಸಿದ್ದವು.

ಆದರೆ ಬಳಿಕ ಅಮಿತ್‌ ಶಾ ಭೇಟಿಯಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು ಈಶ್ವರಪ್ಪ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ʼಇಂದು ರಾತ್ರಿ 10 ಗಂಟೆಯ ಬಳಿಕ ಅಮಿತ್‌ ಶಾ ಅವರನ್ನು ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ, ಅಮಿತ್‌ ಶಾ ಅವರು ಭೇಟಿಗೆ ಲಭ್ಯವಿರುವುದಿಲ್ಲ ಎಂಬ ಮಾಹಿತಿ ಬಂದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಲೋಕಸಭೆ ಚುನಾವಣೆಯಲ್ಲಿ ಸೋಲಲಿ ಎನ್ನುವ ಅಪೇಕ್ಷೆ ಕೇಂದ್ರ ಸಚಿವ ಅಮಿತ್‌ ಶಾ ಅವರಿಗೆ ಇರಬಹುದುʼ ಎಂದು ಹೇಳಿಕೆ ನೀಡಿ ಶಿವಮೊಗ್ಗದಿಂದ ಸ್ಪರ್ಧೆ ಖಚಿತ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.

andolana

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago