ರಾಜಕೀಯ

ಕಾಂಗ್ರೆಸ್‌ ಸರ್ಕಾರ 5 ವರ್ಷ ನಡೆಯಲಿ : ಶ್ರೀರಾಮುಲು

ಕೋಲಾರ : ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ಜನ ಆಶಿರ್ವಾದ ಮಾಡಿದ್ದಾರೆ. ಹಾಗಾಗಿ ಸರ್ಕಾರಕ್ಕೆ ಧಕ್ಕೆ ತರುವ ಕೆಲಸವನ್ನು ಯಾರೂ ಕೂಡ ಮಾಡಬಾರದು. 5 ವರ್ಷಗಳ ಕಾಲ ಅವರ ಆಡಳಿತ ನಡೆಯಲಿ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೇಳಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್‌ ಗೆ ಉಳಿಗಾಲವಿಲ್ಲ ಎನ್ನುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ ಸರ್ಕಾರ ಬೀಳುತ್ತೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ರಜ್ಯದ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡುವ ಮೂಲಕ ಆಶಿರ್ವಾದ ಮಾಡಿದ್ದಾರೆ ಹಾಗಾಗಿ ಅವರು 5 ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತ ನಡೆಸಲಿ. ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಸರ್ಕಾರಕ್ಕೆ ಯಾರೂ ಕೂಡ ಧಕ್ಕೆ ತರುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ.

ಇನ್ನು ಡಿಕೆಶಿ ಪ್ರಕರಣವನ್ನು ವಾಪಸ್‌ ಪಡೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಬಿಐ ತನಿಖೆ ಆಗಬೇಕಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಪ್ರಕರಣವನ್ನು ಕ್ಯಾಬಿನೆಟ್‌ ವಾಪಸ್‌ ಪಡೆಯಲು ಅನುಮತಿ ನೀಡಿರುವುದು ಭಯ ತರಿಸಿದೆ. ಅವರು ಸರ್ಕಾರವನ್ನು ಬೊಂಬೆಯಂತೆ ನಡೆಸಿಕೊಳ್ಳುತ್ತಿದ್ದಾರೆ. ಇದನ್ನು ನೋಡಿದರೆ ಸರ್ಕಾರವೇ ಅವರಿಗೆ ತಲೆ ಬಾಗಿದೆಯಾ ಎಂಬ ಪ್ರಶ್ನೆ ಕಾಡುತ್ತದೆ. ಡಿಕೆಶಿಗೆ ಕಾನೂನಿನ ಬಗ್ಗೆ ಗೌರವ ಇದ್ದಿದ್ದರೆ, ನ್ಯಾಯಯುತವಾಗಿ ಪ್ರಕರಣದಿಂದ ಹೊರಬರುವ ವಿಶ್ವಾಸ ಇದ್ದಿದ್ದರೆ ಈ ರೀತಿ ಮಾಡುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ್ದ ಹಿಂದಿನ ಬಿಜೆಪಿ ಅವಧಿಯ ಸರ್ಕಾರದ ಆದೇಶವನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಕಳೆದ ವಾರ ನಡೆದ ಕ್ಯಾಬಿನೆಟ್‌ ಮೀಟಿಂಗ್‌ ನಲ್ಲಿ ತೀರ್ಮಾನಿಸಿತ್ತು.

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

15 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago