ರಾಜಕೀಯ

ಕಾಂಗ್ರೆಸ್‌ ಸರ್ಕಾರ 5 ವರ್ಷ ನಡೆಯಲಿ : ಶ್ರೀರಾಮುಲು

ಕೋಲಾರ : ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ಜನ ಆಶಿರ್ವಾದ ಮಾಡಿದ್ದಾರೆ. ಹಾಗಾಗಿ ಸರ್ಕಾರಕ್ಕೆ ಧಕ್ಕೆ ತರುವ ಕೆಲಸವನ್ನು ಯಾರೂ ಕೂಡ ಮಾಡಬಾರದು. 5 ವರ್ಷಗಳ ಕಾಲ ಅವರ ಆಡಳಿತ ನಡೆಯಲಿ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೇಳಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್‌ ಗೆ ಉಳಿಗಾಲವಿಲ್ಲ ಎನ್ನುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ ಸರ್ಕಾರ ಬೀಳುತ್ತೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ರಜ್ಯದ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡುವ ಮೂಲಕ ಆಶಿರ್ವಾದ ಮಾಡಿದ್ದಾರೆ ಹಾಗಾಗಿ ಅವರು 5 ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತ ನಡೆಸಲಿ. ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಸರ್ಕಾರಕ್ಕೆ ಯಾರೂ ಕೂಡ ಧಕ್ಕೆ ತರುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ.

ಇನ್ನು ಡಿಕೆಶಿ ಪ್ರಕರಣವನ್ನು ವಾಪಸ್‌ ಪಡೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಬಿಐ ತನಿಖೆ ಆಗಬೇಕಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಪ್ರಕರಣವನ್ನು ಕ್ಯಾಬಿನೆಟ್‌ ವಾಪಸ್‌ ಪಡೆಯಲು ಅನುಮತಿ ನೀಡಿರುವುದು ಭಯ ತರಿಸಿದೆ. ಅವರು ಸರ್ಕಾರವನ್ನು ಬೊಂಬೆಯಂತೆ ನಡೆಸಿಕೊಳ್ಳುತ್ತಿದ್ದಾರೆ. ಇದನ್ನು ನೋಡಿದರೆ ಸರ್ಕಾರವೇ ಅವರಿಗೆ ತಲೆ ಬಾಗಿದೆಯಾ ಎಂಬ ಪ್ರಶ್ನೆ ಕಾಡುತ್ತದೆ. ಡಿಕೆಶಿಗೆ ಕಾನೂನಿನ ಬಗ್ಗೆ ಗೌರವ ಇದ್ದಿದ್ದರೆ, ನ್ಯಾಯಯುತವಾಗಿ ಪ್ರಕರಣದಿಂದ ಹೊರಬರುವ ವಿಶ್ವಾಸ ಇದ್ದಿದ್ದರೆ ಈ ರೀತಿ ಮಾಡುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ್ದ ಹಿಂದಿನ ಬಿಜೆಪಿ ಅವಧಿಯ ಸರ್ಕಾರದ ಆದೇಶವನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಕಳೆದ ವಾರ ನಡೆದ ಕ್ಯಾಬಿನೆಟ್‌ ಮೀಟಿಂಗ್‌ ನಲ್ಲಿ ತೀರ್ಮಾನಿಸಿತ್ತು.

lokesh

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

8 mins ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

50 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

1 hour ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

2 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago