ರಾಜಕೀಯ

ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ ಸಿದ್ದರಾಮಯ್ಯ

  • ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆ
  • ನಿರುದ್ಯೋಗಿಗಳಿಗೆ ಪಕೋಡ ಮಾರಾಟ ಮಾಡಿ ಎಂದಿದ್ದು ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ. ನಿಮಗಾದ ಮಹಾದ್ರೋಹಕ್ಕೆ ತಕ್ಕ ಪಾಠ ಕಲಿಸಿ: ಸಿ.ಎಂ ಕರೆ
  • ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ: ಸಿ.ಎಂ ಪ್ರಶ್ನೆ

 

ಹಾಸನ : ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಪರವಾಗಿ ನಡೆದ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದರು.

ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ ಎಂದು ಸಿ.ಎಂ ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿದರು. ಆದರೆ ಇದುವರೆಗೂ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದೆ ವಂಚಿಸಿದ್ದಾರೆ. ಈ ವಂಚನೆಯನ್ನು ಪ್ರಶ್ನಿಸುವುದನ್ನು ಬಿಟ್ಟ ಜೆಡಿಎಸ್ ನವರು ಹೋಗಿ ಬಿಜೆಪಿ ಜತೆಗೇ ಜಮೆಯಾಗಿದ್ದಾರೆ. ಇದು ಪ್ರಜ್ವಲ್ ರೇವಣ್ಣ ಅವರು ತಮಗೆ ಮತ ಹಾಕಿದವರಿಗೆ ಮಾಡಿದ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿಯವರನ್ನು ನೀವೂ ನಂಬಿದ್ರಿ. ಭಾರತೀಯರೆಲ್ಲರೂ ನಂಬಿದ್ರು. ಆದರೆ, ಉದ್ಯೋಗ ಕೊಡಿ ಅಂದಾಗ, ಹೋಗಿ ಪಕೋಡ ಮಾರಾಟ ಮಾಡಿ ಅಂದ್ರು. ಇದು ವಿದ್ಯಾವಂತ ಯುವಕ/ ಯುವತಿಯರಿಗೆ ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ ಎಂದು ಪ್ರಶ್ನಿಸಿದರು.

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ. ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದರು.

ಮೋದಿ ಅವರ ದರ್ಬಾರ್ ನಲ್ಲಿ ಆದ ಬೆಲೆ ಏರಿಕೆಯಿಂದ ಬಸವಳಿದಿದ್ದ ರಾಜ್ಯದ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ನಾವು ಐದು ಗ್ಯಾರಂಟಿಗಳನ್ನು ರೂಪಿಸಿದೆವು. ಜಾರಿ ಮಾಡಿದೆವು. ನಾನು ನುಡಿದಂತೆ ನಡೆದಂತೆ ನಡೆದಿದ್ದೇವೆ. ಮೋದಿಯವರಂತೆ ಭಾರತೀಯರನ್ನು ನಾವು ನಂಬಿಸಿ ದ್ರೋಹ ಬಗೆಯಲ್ಲ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

21 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

21 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

21 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

21 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

21 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

21 hours ago