ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಕುರಿತ ಚಟುವಟಿಕೆಗಳು ಈಗಾಗಲೇ ಆರಂಭವಾಗಿವೆ. ಈ ಬಾರಿ ಜೆಡಿಎಸ್ ಎನ್ಡಿಎ ಮೈತ್ರಿಕೂಟದ ಜತೆ ಕೈಜೋಡಿಸಿದ್ದು ಸೀಟು ಹಂಚಿಕೊಳ್ಳಲಿದೆ. ಇನ್ನು ಜೆಡಿಎಸ್ ಪರ ಈ ಬಾರಿ ಯಾವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳೂ ಸಹ ಆರಂಭಗೊಂಡಿವೆ.
ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಚುನಾವಣೆ ಸಮಯಕ್ಕೆ 91 ವರ್ಷ ವಯಸ್ಸಾಗಲಿದ್ದು ಈ ಬಾರಿ ಹೆಚ್ಡಿಡಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಅನುಮಾನ ಎಂದೇ ಎಣಿಸಲಾಗಿತ್ತು. ಆದರೆ ಇದೀಗ ದೇವೇಗೌಡ ಅವರು ಇಡುತ್ತಿರುವ ಹೆಜ್ಜೆ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸಲಿದ್ದಾರಾ ಎಂಬ ಅನುಮಾನ ಮೂಡಿಸಿದೆ. ಅದರಲ್ಲಿಯೂ ಈ ಬಾರಿ ಹಾಸನ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.
ಹೌದು, ಲೋಕಸಭೆ ಚುನಾವಣೆಯ ಹಿನ್ನೆಲೆ ಹೆಚ್ಡಿ ದೇವೇಗೌಡ ಅವರು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರಕಟ್ಟೆಯಲ್ಲಿ ನಾಳೆ ( ಡಿಸೆಂಬರ್ 1 ) ವಿಶೇಷ ಸಭೆಯೊಂದನ್ನು ಕರೆದಿದ್ದಾರೆ. ಈ ಕುರಿತು ಪತ್ರವೊಂದನ್ನು ಬರೆದಿರುವ ದೇವೇಗೌಡರು ಸಂಸದರು, ಶಾಸಕರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗಳ ಮಾಜಿ ಸದಸ್ಯರು ಹಾಗೂ ಪಕ್ಷದ ಮುಖಂಡರನ್ನು ಆಹ್ವಾನಿಸಿದ್ದಾರೆ.
ದೇವೇಗೌಡರ ಈ ನಡೆ ಇದೀಗ ಅವರು ಹಾಸನದಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರಾ ಎಂಬ ಪ್ರಶ್ನೆಯನ್ನು ಮೂಡಿಸಿದೆ. ಮೂಲಗಳ ಪ್ರಕಾರ ಜೆಡಿಎಸ್ ಈ ಬಾರಿ ಐದು ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿಗೆ ಬೇಡಿಕೆ ಇಟ್ಟಿದೆ ಎಂದು ತಿಳಿದುಬಂದಿದ್ದು, ಹಾಸನದಿಂದ ದೇವೇಗೌಡರೇ ಕಣಕ್ಕಿಳಿಯಲಿದ್ದಾರಾ, ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರಾ ಅಥವಾ ಬೇರೆ ಯಾರಾದರೂ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರಾ ಎಂಬ ಕುತೂಹಲ ಕೆರಳಿಸಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದೇವೇಗೌಡ ಅವರು ಹಾಸನ ಕ್ಷೇತ್ರವನ್ನು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿ 13,339 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಹಾಸನದಿಂದ ಕಣಕ್ಕಿಳಿದಿದ್ದ ಪ್ರಜ್ವಲ್ ರೇವಣ್ಣ ಜಯಭೇರಿ ಬಾರಿಸಿದ್ದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…