ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಕುರಿತ ಚಟುವಟಿಕೆಗಳು ಈಗಾಗಲೇ ಆರಂಭವಾಗಿವೆ. ಈ ಬಾರಿ ಜೆಡಿಎಸ್ ಎನ್ಡಿಎ ಮೈತ್ರಿಕೂಟದ ಜತೆ ಕೈಜೋಡಿಸಿದ್ದು ಸೀಟು ಹಂಚಿಕೊಳ್ಳಲಿದೆ. ಇನ್ನು ಜೆಡಿಎಸ್ ಪರ ಈ ಬಾರಿ ಯಾವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳೂ ಸಹ ಆರಂಭಗೊಂಡಿವೆ.
ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಚುನಾವಣೆ ಸಮಯಕ್ಕೆ 91 ವರ್ಷ ವಯಸ್ಸಾಗಲಿದ್ದು ಈ ಬಾರಿ ಹೆಚ್ಡಿಡಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಅನುಮಾನ ಎಂದೇ ಎಣಿಸಲಾಗಿತ್ತು. ಆದರೆ ಇದೀಗ ದೇವೇಗೌಡ ಅವರು ಇಡುತ್ತಿರುವ ಹೆಜ್ಜೆ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸಲಿದ್ದಾರಾ ಎಂಬ ಅನುಮಾನ ಮೂಡಿಸಿದೆ. ಅದರಲ್ಲಿಯೂ ಈ ಬಾರಿ ಹಾಸನ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.
ಹೌದು, ಲೋಕಸಭೆ ಚುನಾವಣೆಯ ಹಿನ್ನೆಲೆ ಹೆಚ್ಡಿ ದೇವೇಗೌಡ ಅವರು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರಕಟ್ಟೆಯಲ್ಲಿ ನಾಳೆ ( ಡಿಸೆಂಬರ್ 1 ) ವಿಶೇಷ ಸಭೆಯೊಂದನ್ನು ಕರೆದಿದ್ದಾರೆ. ಈ ಕುರಿತು ಪತ್ರವೊಂದನ್ನು ಬರೆದಿರುವ ದೇವೇಗೌಡರು ಸಂಸದರು, ಶಾಸಕರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗಳ ಮಾಜಿ ಸದಸ್ಯರು ಹಾಗೂ ಪಕ್ಷದ ಮುಖಂಡರನ್ನು ಆಹ್ವಾನಿಸಿದ್ದಾರೆ.
ದೇವೇಗೌಡರ ಈ ನಡೆ ಇದೀಗ ಅವರು ಹಾಸನದಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರಾ ಎಂಬ ಪ್ರಶ್ನೆಯನ್ನು ಮೂಡಿಸಿದೆ. ಮೂಲಗಳ ಪ್ರಕಾರ ಜೆಡಿಎಸ್ ಈ ಬಾರಿ ಐದು ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿಗೆ ಬೇಡಿಕೆ ಇಟ್ಟಿದೆ ಎಂದು ತಿಳಿದುಬಂದಿದ್ದು, ಹಾಸನದಿಂದ ದೇವೇಗೌಡರೇ ಕಣಕ್ಕಿಳಿಯಲಿದ್ದಾರಾ, ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರಾ ಅಥವಾ ಬೇರೆ ಯಾರಾದರೂ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರಾ ಎಂಬ ಕುತೂಹಲ ಕೆರಳಿಸಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದೇವೇಗೌಡ ಅವರು ಹಾಸನ ಕ್ಷೇತ್ರವನ್ನು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿ 13,339 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಹಾಸನದಿಂದ ಕಣಕ್ಕಿಳಿದಿದ್ದ ಪ್ರಜ್ವಲ್ ರೇವಣ್ಣ ಜಯಭೇರಿ ಬಾರಿಸಿದ್ದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…