ರಾಜಕೀಯ

ಸಂಸದ ಡಿಕೆ ಸುರೇಶ್‌ ಬರೋಬ್ಬರಿ 598 ಕೋಟಿ ರೂ ಆಸ್ತಿಗೆ ಒಡೆಯ!

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಅದರ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಅವರು ಇಂದು ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನು ಮೌಲ್ಯವನ್ನು ಘೋಷಿಸಿದ್ದಾರೆ. 598 ಕೋಟಿ ರೂಪಾಯಿಗೆ ಒಡೆಯರಾಗಿದ್ದಾರೆ ಡಿಕೆ ಸುರೇಶ್‌. ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಜೊತೆಗೆ 207 ಕೋಟಿ ರೂಪಾಯಿ ಸಾಲವಿದೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರ ಕಿರಿಯ ಸಹೋದರ ಸುರೇಶ್‌ ಅವರು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ 339 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿದ್ದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿರುವ ಅವರು ಪುನರಾಯ್ಕೆ ಬಯಸಿ ಇಂದು ಸಲ್ಲಿಸಿದ ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ ಬ್ಯಾಂಕ್‌ಗಳಲ್ಲಿ 16.61 ಕೋಟಿ ರೂಪಾಯಿ ಠೇವಣಿ ಹೊಂದಿದ್ದಾರೆ. 21 ಸ್ಥಳಗಳಲ್ಲಿ 32.76 ಕೋಟಿ ಮೌಲ್ಯದ ಕೃಷಿ ಭೂಮಿ, 210.47 ಕೋಟಿ ಮೌಲ್ಯದ 27 ಸ್ಥಳಗಳಲ್ಲಿ ಕೃಷಿಯೇತರ ಭೂಮಿ, 211.91 ಕೋಟಿ ಮೌಲ್ಯದ ಒಂಬತ್ತು ವಾಣಿಜ್ಯ ಕಟ್ಟಡಗಳು ಹಾಗೂ 27.13 ಕೋಟಿ ಮೌಲ್ಯದ ಮೂರು ವಸತಿ ಕಟ್ಟಡಗಳನ್ನು ಹೊಂದಿದ್ದಾರೆ. ಇನ್ನು ಡಿ.ಕೆ. ಸುರೇಶ್ ಸ್ವಂತ ಕಾರು ಹೊಂದಿಲ್ಲ. ಮನೆಯಲ್ಲಿ 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ.

andolana

Recent Posts

ಅರಮನೆ ಬಳಿ ಹೀಲಿಯಂ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಪ್ರಮೋದ್‌ ಮುತಾಲಿಕ್‌ ಆಗ್ರಹ

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು,…

12 mins ago

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

36 mins ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

53 mins ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

1 hour ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

2 hours ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

2 hours ago