ರಾಜಕೀಯ

ಸಂಸದ ಡಿಕೆ ಸುರೇಶ್‌ ಬರೋಬ್ಬರಿ 598 ಕೋಟಿ ರೂ ಆಸ್ತಿಗೆ ಒಡೆಯ!

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಅದರ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಅವರು ಇಂದು ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನು ಮೌಲ್ಯವನ್ನು ಘೋಷಿಸಿದ್ದಾರೆ. 598 ಕೋಟಿ ರೂಪಾಯಿಗೆ ಒಡೆಯರಾಗಿದ್ದಾರೆ ಡಿಕೆ ಸುರೇಶ್‌. ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಜೊತೆಗೆ 207 ಕೋಟಿ ರೂಪಾಯಿ ಸಾಲವಿದೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರ ಕಿರಿಯ ಸಹೋದರ ಸುರೇಶ್‌ ಅವರು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ 339 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿದ್ದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿರುವ ಅವರು ಪುನರಾಯ್ಕೆ ಬಯಸಿ ಇಂದು ಸಲ್ಲಿಸಿದ ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ ಬ್ಯಾಂಕ್‌ಗಳಲ್ಲಿ 16.61 ಕೋಟಿ ರೂಪಾಯಿ ಠೇವಣಿ ಹೊಂದಿದ್ದಾರೆ. 21 ಸ್ಥಳಗಳಲ್ಲಿ 32.76 ಕೋಟಿ ಮೌಲ್ಯದ ಕೃಷಿ ಭೂಮಿ, 210.47 ಕೋಟಿ ಮೌಲ್ಯದ 27 ಸ್ಥಳಗಳಲ್ಲಿ ಕೃಷಿಯೇತರ ಭೂಮಿ, 211.91 ಕೋಟಿ ಮೌಲ್ಯದ ಒಂಬತ್ತು ವಾಣಿಜ್ಯ ಕಟ್ಟಡಗಳು ಹಾಗೂ 27.13 ಕೋಟಿ ಮೌಲ್ಯದ ಮೂರು ವಸತಿ ಕಟ್ಟಡಗಳನ್ನು ಹೊಂದಿದ್ದಾರೆ. ಇನ್ನು ಡಿ.ಕೆ. ಸುರೇಶ್ ಸ್ವಂತ ಕಾರು ಹೊಂದಿಲ್ಲ. ಮನೆಯಲ್ಲಿ 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ.

andolana

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

2 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

2 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

2 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

5 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

5 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago