ರಾಜಕೀಯ

ಸಂಸದ ಡಿಕೆ ಸುರೇಶ್‌ ಬರೋಬ್ಬರಿ 598 ಕೋಟಿ ರೂ ಆಸ್ತಿಗೆ ಒಡೆಯ!

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಅದರ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಅವರು ಇಂದು ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನು ಮೌಲ್ಯವನ್ನು ಘೋಷಿಸಿದ್ದಾರೆ. 598 ಕೋಟಿ ರೂಪಾಯಿಗೆ ಒಡೆಯರಾಗಿದ್ದಾರೆ ಡಿಕೆ ಸುರೇಶ್‌. ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಜೊತೆಗೆ 207 ಕೋಟಿ ರೂಪಾಯಿ ಸಾಲವಿದೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರ ಕಿರಿಯ ಸಹೋದರ ಸುರೇಶ್‌ ಅವರು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ 339 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿದ್ದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿರುವ ಅವರು ಪುನರಾಯ್ಕೆ ಬಯಸಿ ಇಂದು ಸಲ್ಲಿಸಿದ ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ ಬ್ಯಾಂಕ್‌ಗಳಲ್ಲಿ 16.61 ಕೋಟಿ ರೂಪಾಯಿ ಠೇವಣಿ ಹೊಂದಿದ್ದಾರೆ. 21 ಸ್ಥಳಗಳಲ್ಲಿ 32.76 ಕೋಟಿ ಮೌಲ್ಯದ ಕೃಷಿ ಭೂಮಿ, 210.47 ಕೋಟಿ ಮೌಲ್ಯದ 27 ಸ್ಥಳಗಳಲ್ಲಿ ಕೃಷಿಯೇತರ ಭೂಮಿ, 211.91 ಕೋಟಿ ಮೌಲ್ಯದ ಒಂಬತ್ತು ವಾಣಿಜ್ಯ ಕಟ್ಟಡಗಳು ಹಾಗೂ 27.13 ಕೋಟಿ ಮೌಲ್ಯದ ಮೂರು ವಸತಿ ಕಟ್ಟಡಗಳನ್ನು ಹೊಂದಿದ್ದಾರೆ. ಇನ್ನು ಡಿ.ಕೆ. ಸುರೇಶ್ ಸ್ವಂತ ಕಾರು ಹೊಂದಿಲ್ಲ. ಮನೆಯಲ್ಲಿ 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ.

andolana

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

6 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

7 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

7 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

8 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

8 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

9 hours ago