ರಾಜಕೀಯ

ಸಂಸದ ಡಿಕೆ ಸುರೇಶ್‌ ಬರೋಬ್ಬರಿ 598 ಕೋಟಿ ರೂ ಆಸ್ತಿಗೆ ಒಡೆಯ!

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಅದರ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಅವರು ಇಂದು ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನು ಮೌಲ್ಯವನ್ನು ಘೋಷಿಸಿದ್ದಾರೆ. 598 ಕೋಟಿ ರೂಪಾಯಿಗೆ ಒಡೆಯರಾಗಿದ್ದಾರೆ ಡಿಕೆ ಸುರೇಶ್‌. ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಜೊತೆಗೆ 207 ಕೋಟಿ ರೂಪಾಯಿ ಸಾಲವಿದೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರ ಕಿರಿಯ ಸಹೋದರ ಸುರೇಶ್‌ ಅವರು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ 339 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿದ್ದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿರುವ ಅವರು ಪುನರಾಯ್ಕೆ ಬಯಸಿ ಇಂದು ಸಲ್ಲಿಸಿದ ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ ಬ್ಯಾಂಕ್‌ಗಳಲ್ಲಿ 16.61 ಕೋಟಿ ರೂಪಾಯಿ ಠೇವಣಿ ಹೊಂದಿದ್ದಾರೆ. 21 ಸ್ಥಳಗಳಲ್ಲಿ 32.76 ಕೋಟಿ ಮೌಲ್ಯದ ಕೃಷಿ ಭೂಮಿ, 210.47 ಕೋಟಿ ಮೌಲ್ಯದ 27 ಸ್ಥಳಗಳಲ್ಲಿ ಕೃಷಿಯೇತರ ಭೂಮಿ, 211.91 ಕೋಟಿ ಮೌಲ್ಯದ ಒಂಬತ್ತು ವಾಣಿಜ್ಯ ಕಟ್ಟಡಗಳು ಹಾಗೂ 27.13 ಕೋಟಿ ಮೌಲ್ಯದ ಮೂರು ವಸತಿ ಕಟ್ಟಡಗಳನ್ನು ಹೊಂದಿದ್ದಾರೆ. ಇನ್ನು ಡಿ.ಕೆ. ಸುರೇಶ್ ಸ್ವಂತ ಕಾರು ಹೊಂದಿಲ್ಲ. ಮನೆಯಲ್ಲಿ 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago