ಮಾಲೆ : ಮಾಲ್ಡೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಸಂಪುಟ ಸಚಿವರ ನೇಮಕಕ್ಕೆ ಅನುಮೋದನೆ ಪಡೆಯಲು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಸಂಸದರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ನಡೆದಿದೆ ಎಂದು indiatoday.in ವರದಿ ಮಾಡಿದೆ.
ಕ್ರಮವಾಗಿ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ ಮೈತ್ರಿಕೂಟಗಳಾದ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಹಾಗೂ ಪ್ರೊಗ್ರೆಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ ಸಂಸದರ ನಡುವೆ ಘರ್ಷಣೆ ನಡೆದಿದ್ದರಿಂದ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಯಾಯಿತು.
ಅಂತರ್ಜಾಲದಲ್ಲಿ ಕಂಡು ಬರುತ್ತಿರುವ ವಿಡಿಯೊಗಳ ಪ್ರಕಾರ, ಸಂಸದರು ಪರಸ್ಪರ ಗುದ್ದಾಡಿಕೊಂಡಿದ್ದರಿಂದ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಯಾಗಿದೆ.
ವ್ಯಾಪಕವಾಗಿ ಹಂಚಿಕೆಯಾಗಿರುವ ಕೆಲವು ವಿಡಿಯೊ ತುಣುಕುಗಳ ಪ್ರಕಾರ, ಕೆಲವು ಸಂಸದರು ಪರಸ್ಪರ ವೇದಿಕೆಯಿಂದ ಕೆಳಗೆ ತಳ್ಳಿಕೊಂಡಿರುವ ಘಟನೆಗಳೂ ಸೆರೆಯಾಗಿವೆ.
ಈ ವಿಡಿಯೊವನ್ನು ಮಾಲ್ಡೀವ್ಸ್ ನ ಸ್ಥಳೀಯ ಸುದ್ದಿ ಸಂಸ್ಥೆಯಾದ ಅಧಂಧು ಕೂಡಾ ಹಂಚಿಕೊಂಡಿದೆ.
ಅಧಂಧು ಸುದ್ದಿ ಸಂಸ್ಥೆಯ ಪ್ರಕಾರ, ವಿರೋಧ ಪಕ್ಷಗಳ ಸಂಸದರನ್ನು ಆಡಳಿತಾರೂಢ ಪಕ್ಷದ ಸಂಸದರು ಸಂಸತ್ತನ್ನು ಪ್ರವೇಶಿಸುವುದರಿಂದ ತಡೆದಿದ್ದಾರೆ.
ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಎಂಡಿಪಿಯು, ಆಡಳಿತಾರೂಢ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝ್ಝು ಸಂಪುಟವನ್ನು ತನ್ನ ಪಕ್ಷದ ನಾಲ್ವರು ಸದಸ್ಯರು ಸೇರ್ಪಡೆಯಾಗುವುದಕ್ಕೆ ಅನುಮೋದನೆ ನೀಡದೆ ಇದ್ದುದರಿಂದ ಅವರು ಇಂತಹ ನಡೆ ಅನುಸರಿಸಿದರು ಎಂದು ಹೇಳಲಾಗಿದೆ.
ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಪಿಎನ್ಸಿ ಮತ್ತು ಪಿಪಿಎಂ, ಎಂಡಿಪಿಯು ತನ್ನ ನಾಲ್ವರು ಸದಸ್ಯರು ಸಂಪುಟ ಸೇರ್ಪಡೆಯಾಗಲು ಅನುಮೋದನೆ ನೀಡದಿರುವ ನಡೆಯಿಂದ ಜನರಿಗೆ ಸೇವೆ ಒದಗಿಸಲು ತೊಂದರೆ ಉಂಟಾಗಿದೆ ಎಂದು ಹೇಳಿವೆ.
ಸಂಸತ್ತಿನೊಳಗಿನ ಚಿತ್ರೀಕರಿಸಿರುವ ವಿಡಿಯೊಗಳಲ್ಲಿ ಸಂಸದರು ಪರಸ್ಪರ ನೆಲದ ಮೇಲೆ ಗುದ್ದಾಡುತ್ತಿರುವುದು ಹಾಗೂ ಓರ್ವ ಸಂಸದನ ಕೂದಲನ್ನು ಕೀಳುತ್ತಿರುವುದೂ ಸೆರೆಯಾಗಿದೆ.
ಕೂದಲು ಕೀಳಲ್ಪಟ್ಟ ಸಂಸದನು ಸಭಾಧ್ಯಕ್ಷರು ಸಂಸತ್ತನ್ನು ಉದ್ದೇಶಿಸಿ ಮಾತನಾಡದಂತೆ ತಡೆ ಒಡ್ಡಲು ತುತ್ತೂರಿಯಂಥ ವಾದನವನ್ನು ಊದುತ್ತಿರುವುದೂ ವಿಡಿಯೊದಲ್ಲಿ ಸೆರೆಯಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…