ರಾಜಕೀಯ

ಮಾಲ್ಡೀವ್ಸ್‌ ಅಧಿವೇಶನದಲ್ಲಿ ಸಂಸದರ ಬಡಿದಾಟ !

ಮಾಲೆ :   ಮಾಲ್ಡೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಸಂಪುಟ ಸಚಿವರ ನೇಮಕಕ್ಕೆ ಅನುಮೋದನೆ ಪಡೆಯಲು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಸಂಸದರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ನಡೆದಿದೆ ಎಂದು indiatoday.in ವರದಿ ಮಾಡಿದೆ.

ಕ್ರಮವಾಗಿ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ ಮೈತ್ರಿಕೂಟಗಳಾದ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಹಾಗೂ ಪ್ರೊಗ್ರೆಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ ಸಂಸದರ ನಡುವೆ ಘರ್ಷಣೆ ನಡೆದಿದ್ದರಿಂದ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಯಾಯಿತು.

ಅಂತರ್ಜಾಲದಲ್ಲಿ ಕಂಡು ಬರುತ್ತಿರುವ ವಿಡಿಯೊಗಳ ಪ್ರಕಾರ, ಸಂಸದರು ಪರಸ್ಪರ ಗುದ್ದಾಡಿಕೊಂಡಿದ್ದರಿಂದ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಯಾಗಿದೆ.

ವ್ಯಾಪಕವಾಗಿ ಹಂಚಿಕೆಯಾಗಿರುವ ಕೆಲವು ವಿಡಿಯೊ ತುಣುಕುಗಳ ಪ್ರಕಾರ, ಕೆಲವು ಸಂಸದರು ಪರಸ್ಪರ ವೇದಿಕೆಯಿಂದ ಕೆಳಗೆ ತಳ್ಳಿಕೊಂಡಿರುವ ಘಟನೆಗಳೂ ಸೆರೆಯಾಗಿವೆ.

ಈ ವಿಡಿಯೊವನ್ನು ಮಾಲ್ಡೀವ್ಸ್ ನ ಸ್ಥಳೀಯ ಸುದ್ದಿ ಸಂಸ್ಥೆಯಾದ ಅಧಂಧು ಕೂಡಾ ಹಂಚಿಕೊಂಡಿದೆ.

ಅಧಂಧು ಸುದ್ದಿ ಸಂಸ್ಥೆಯ ಪ್ರಕಾರ, ವಿರೋಧ ಪಕ್ಷಗಳ ಸಂಸದರನ್ನು ಆಡಳಿತಾರೂಢ ಪಕ್ಷದ ಸಂಸದರು ಸಂಸತ್ತನ್ನು ಪ್ರವೇಶಿಸುವುದರಿಂದ ತಡೆದಿದ್ದಾರೆ.

ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಎಂಡಿಪಿಯು, ಆಡಳಿತಾರೂಢ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝ್ಝು ಸಂಪುಟವನ್ನು ತನ್ನ ಪಕ್ಷದ ನಾಲ್ವರು ಸದಸ್ಯರು ಸೇರ್ಪಡೆಯಾಗುವುದಕ್ಕೆ ಅನುಮೋದನೆ ನೀಡದೆ ಇದ್ದುದರಿಂದ ಅವರು ಇಂತಹ ನಡೆ ಅನುಸರಿಸಿದರು ಎಂದು ಹೇಳಲಾಗಿದೆ.

ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಪಿಎನ್‍ಸಿ ಮತ್ತು ಪಿಪಿಎಂ, ಎಂಡಿಪಿಯು ತನ್ನ ನಾಲ್ವರು ಸದಸ್ಯರು ಸಂಪುಟ ಸೇರ್ಪಡೆಯಾಗಲು ಅನುಮೋದನೆ ನೀಡದಿರುವ ನಡೆಯಿಂದ ಜನರಿಗೆ ಸೇವೆ ಒದಗಿಸಲು ತೊಂದರೆ ಉಂಟಾಗಿದೆ ಎಂದು ಹೇಳಿವೆ.

ಸಂಸತ್ತಿನೊಳಗಿನ ಚಿತ್ರೀಕರಿಸಿರುವ ವಿಡಿಯೊಗಳಲ್ಲಿ ಸಂಸದರು ಪರಸ್ಪರ ನೆಲದ ಮೇಲೆ ಗುದ್ದಾಡುತ್ತಿರುವುದು ಹಾಗೂ ಓರ್ವ ಸಂಸದನ ಕೂದಲನ್ನು ಕೀಳುತ್ತಿರುವುದೂ ಸೆರೆಯಾಗಿದೆ.

ಕೂದಲು ಕೀಳಲ್ಪಟ್ಟ ಸಂಸದನು ಸಭಾಧ್ಯಕ್ಷರು ಸಂಸತ್ತನ್ನು ಉದ್ದೇಶಿಸಿ ಮಾತನಾಡದಂತೆ ತಡೆ ಒಡ್ಡಲು ತುತ್ತೂರಿಯಂಥ ವಾದನವನ್ನು ಊದುತ್ತಿರುವುದೂ ವಿಡಿಯೊದಲ್ಲಿ ಸೆರೆಯಾಗಿದೆ.

andolanait

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

5 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

5 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

5 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

6 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

6 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

7 hours ago