ಮಾಲೆ : ಮಾಲ್ಡೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಸಂಪುಟ ಸಚಿವರ ನೇಮಕಕ್ಕೆ ಅನುಮೋದನೆ ಪಡೆಯಲು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಸಂಸದರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ನಡೆದಿದೆ ಎಂದು indiatoday.in ವರದಿ ಮಾಡಿದೆ.
ಕ್ರಮವಾಗಿ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ ಮೈತ್ರಿಕೂಟಗಳಾದ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಹಾಗೂ ಪ್ರೊಗ್ರೆಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ ಸಂಸದರ ನಡುವೆ ಘರ್ಷಣೆ ನಡೆದಿದ್ದರಿಂದ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಯಾಯಿತು.
ಅಂತರ್ಜಾಲದಲ್ಲಿ ಕಂಡು ಬರುತ್ತಿರುವ ವಿಡಿಯೊಗಳ ಪ್ರಕಾರ, ಸಂಸದರು ಪರಸ್ಪರ ಗುದ್ದಾಡಿಕೊಂಡಿದ್ದರಿಂದ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಯಾಗಿದೆ.
ವ್ಯಾಪಕವಾಗಿ ಹಂಚಿಕೆಯಾಗಿರುವ ಕೆಲವು ವಿಡಿಯೊ ತುಣುಕುಗಳ ಪ್ರಕಾರ, ಕೆಲವು ಸಂಸದರು ಪರಸ್ಪರ ವೇದಿಕೆಯಿಂದ ಕೆಳಗೆ ತಳ್ಳಿಕೊಂಡಿರುವ ಘಟನೆಗಳೂ ಸೆರೆಯಾಗಿವೆ.
ಈ ವಿಡಿಯೊವನ್ನು ಮಾಲ್ಡೀವ್ಸ್ ನ ಸ್ಥಳೀಯ ಸುದ್ದಿ ಸಂಸ್ಥೆಯಾದ ಅಧಂಧು ಕೂಡಾ ಹಂಚಿಕೊಂಡಿದೆ.
ಅಧಂಧು ಸುದ್ದಿ ಸಂಸ್ಥೆಯ ಪ್ರಕಾರ, ವಿರೋಧ ಪಕ್ಷಗಳ ಸಂಸದರನ್ನು ಆಡಳಿತಾರೂಢ ಪಕ್ಷದ ಸಂಸದರು ಸಂಸತ್ತನ್ನು ಪ್ರವೇಶಿಸುವುದರಿಂದ ತಡೆದಿದ್ದಾರೆ.
ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಎಂಡಿಪಿಯು, ಆಡಳಿತಾರೂಢ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝ್ಝು ಸಂಪುಟವನ್ನು ತನ್ನ ಪಕ್ಷದ ನಾಲ್ವರು ಸದಸ್ಯರು ಸೇರ್ಪಡೆಯಾಗುವುದಕ್ಕೆ ಅನುಮೋದನೆ ನೀಡದೆ ಇದ್ದುದರಿಂದ ಅವರು ಇಂತಹ ನಡೆ ಅನುಸರಿಸಿದರು ಎಂದು ಹೇಳಲಾಗಿದೆ.
ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಪಿಎನ್ಸಿ ಮತ್ತು ಪಿಪಿಎಂ, ಎಂಡಿಪಿಯು ತನ್ನ ನಾಲ್ವರು ಸದಸ್ಯರು ಸಂಪುಟ ಸೇರ್ಪಡೆಯಾಗಲು ಅನುಮೋದನೆ ನೀಡದಿರುವ ನಡೆಯಿಂದ ಜನರಿಗೆ ಸೇವೆ ಒದಗಿಸಲು ತೊಂದರೆ ಉಂಟಾಗಿದೆ ಎಂದು ಹೇಳಿವೆ.
ಸಂಸತ್ತಿನೊಳಗಿನ ಚಿತ್ರೀಕರಿಸಿರುವ ವಿಡಿಯೊಗಳಲ್ಲಿ ಸಂಸದರು ಪರಸ್ಪರ ನೆಲದ ಮೇಲೆ ಗುದ್ದಾಡುತ್ತಿರುವುದು ಹಾಗೂ ಓರ್ವ ಸಂಸದನ ಕೂದಲನ್ನು ಕೀಳುತ್ತಿರುವುದೂ ಸೆರೆಯಾಗಿದೆ.
ಕೂದಲು ಕೀಳಲ್ಪಟ್ಟ ಸಂಸದನು ಸಭಾಧ್ಯಕ್ಷರು ಸಂಸತ್ತನ್ನು ಉದ್ದೇಶಿಸಿ ಮಾತನಾಡದಂತೆ ತಡೆ ಒಡ್ಡಲು ತುತ್ತೂರಿಯಂಥ ವಾದನವನ್ನು ಊದುತ್ತಿರುವುದೂ ವಿಡಿಯೊದಲ್ಲಿ ಸೆರೆಯಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…