ಇಂದು ( ಡಿಸೆಂಬರ್ 19 ) ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆದಿದ್ದು, 28 ಪ್ರತಿಪಕ್ಷ ನಾಯಕರು ಭಾಗವಹಿಸಿದ್ದ ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ವಿರೋಧ ಪಕ್ಷದ ಬಣ INDIAದ ಪ್ರಧಾನ ಮಂತ್ರಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿದ್ದಾರೆ ಎಂದು ಸಭೆಯ ಬಳಿಕ ಎಂಡಿಎಂಕೆ ನಾಯಕ ವೈಕೊ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ಲೋಕಸಭೆಯಲ್ಲಿ ಮೊದಲು ಗೆಲ್ಲುವುದು ಮುಖ್ಯ, ಉಳಿದದ್ದನ್ನು ನಂತರ ನಿರ್ಧರಿಸಬಹುದು ಎಂದು ಹೇಳಿದ್ದಾರೆ. “ನಾನು ದೀನದಲಿತರಿಗಾಗಿ ಕೆಲಸ ಮಾಡುತ್ತೇನೆ, ಮೊದಲು ಗೆಲ್ಲಲಿ, ನಂತರ ನಾವು ನೋಡುತ್ತೇವೆ, ನಾನು ಏನನ್ನು ಬಯಸುವುದಿಲ್ಲ” ಎಂದು ಖರ್ಗೆ ತಿಳಿಸಿದ್ದಾರೆ.
ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿ ಆಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಖರ್ಗೆ “ಮೊದಲು ನಾವು ಗೆದ್ದು ಬಹುಮತ ಪಡೆಯಬೇಕು. ನಂತರ ಸಂಸದರು ಪ್ರಜಾಸತ್ತಾತ್ಮಕವಾಗಿ ನಿರ್ಧರಿಸುತ್ತಾರೆ” ಎಂದಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…