ರಾಜಕೀಯ

ಮೇ ಬಳಿಕ ರಾಜ್ಯ ಸರ್ಕಾರ ಪಥನ ಆಗೋದು ಗ್ಯಾರಂಟಿ : ಎಚ್‌ಡಿಕೆ

ಮಂಡ್ಯ : ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಇರೋದಿಲ್ಲ. ಮೇ ಬಳಿಕ ರಾಜ್ಯ ಸರ್ಕಾರ ಪಥನವಾಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ದೇವಸ್ಥಾನವೊಂದರ ಜೀರ್ಣೋದ್ಧಾರ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಮಾತನಾಡಿರುವ ಕುಮಾರಸ್ವಾಮಿ ಅವರು ನಾನು ಜನರ ಧ್ವನಿಯಾಗಿರುತ್ತೇನೆ ಎಂದು ಭರವಸೆ ನೀಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಇರುವುದಿಲ್ಲ ಮೇ ತಿಂಗಳ ಬಳಿಕ ಕೈ ಸರ್ಕಾರ ಉರುಳಿ ಬೀಳುವುದು ಗ್ಯಾರಂಟಿ. ಯಾವುದೇ ಕಾರಣಕ್ಕೂ ಈ ಸರ್ಕಾರ ಉಳಿಯೋದಿಲ್ಲ. ಕೆ.ಆರ್‌ ಪೇಟೆ ಶಾಸಕರು ಗೆದ್ದು ಮೂರು ತಿಂಗಳಾದರೂ ಕೂಡ ಕೆಲಸ ಮಾಡಿಲ್ಲ ಎಂದುಕೊಳ್ಳಬೇಡಿ. ನೀವು ಅವರನ್ನು ಒಳ್ಳೆಯವರು ಎಂದು ಗೆಲ್ಲಿಸಿದ್ದೀರಿ. ನೀವು ಅವರ ಮೇಲೆ ಇಟ್ಟಿರುವಷ್ಟೇ ಪ್ರೀತಿಯನ್ನು ಮಂಜಣ್ಣ ಕೂಡ ಇಟ್ಟುಕೊಂಡಿದ್ದಾರೆ. ನಿಮ್ಮ ಕೆಲಸಗಳನ್ನು ಶಾಸಕರ ಜೊತೆ ನಿಂತು ಮಾಡಿಸುವ ಜವಬ್ದಾರಿ ನನ್ನ ಮೇಲಿದೆ. ಐದಾರು ತಿಂಗಳು ಶಾಸಕರಿಗೆ ಸಮಯ ಕೊಡಿ ಎಂದು ಹೇಳಿದ್ದಾರೆ.
ಇನ್ನು ಜೆಡಿಎಸ್‌ ಶಾಸಕ ಮಂಜು ಅವರು ಮಾತನಾಡಿದ್ದು, ನಮ್ಮ ತಾಲೂಕು ಅಭಿವೃದ್ಧಿ ಆಗಬೇಕಾದರೆ ಕುಮಾರಣ್ಣನಿಗೆ ಅವಕಾಶ ಸಿಗಬೇಕು. ಅವರಿಂದ ಮಾತ್ರ ಅಭಿವೃದ್ಧಿ ಸಾಧ್ಯವಾಗಲಿದೆ. ಹಿಂದಿನ ಶಾಸಕರು ಅವರು ಮುಖ್ಯಮಂತ್ರಿಯಾಗಿದ್ದಾಗ ಒಂದು ವರ್ಷಗಳ ಕಾಲ ಅನುದಾನವನ್ನು ಗುದ್ದಲಿ ಪೂಜೆ ಮಾಡಿಕೊಂಡೇ ಕಳೆದಿದ್ದಾರೆ. ಕುಮಾರಸ್ವಾಮಿಯವರಿಗೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಇದೆ. ಇದಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇವೆ. ಹಿಂದೆ ಪಂಚರತ್ನ ಯೋಜನೆ ಜಾರಿಗೆ ಅವಕಾಶ ಸಿಗಲಿಲ್ಲ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ.
lokesh

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

40 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

1 hour ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

3 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago