ರಾಜಕೀಯ

ಮೇ ಬಳಿಕ ರಾಜ್ಯ ಸರ್ಕಾರ ಪಥನ ಆಗೋದು ಗ್ಯಾರಂಟಿ : ಎಚ್‌ಡಿಕೆ

ಮಂಡ್ಯ : ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಇರೋದಿಲ್ಲ. ಮೇ ಬಳಿಕ ರಾಜ್ಯ ಸರ್ಕಾರ ಪಥನವಾಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ದೇವಸ್ಥಾನವೊಂದರ ಜೀರ್ಣೋದ್ಧಾರ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಮಾತನಾಡಿರುವ ಕುಮಾರಸ್ವಾಮಿ ಅವರು ನಾನು ಜನರ ಧ್ವನಿಯಾಗಿರುತ್ತೇನೆ ಎಂದು ಭರವಸೆ ನೀಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಇರುವುದಿಲ್ಲ ಮೇ ತಿಂಗಳ ಬಳಿಕ ಕೈ ಸರ್ಕಾರ ಉರುಳಿ ಬೀಳುವುದು ಗ್ಯಾರಂಟಿ. ಯಾವುದೇ ಕಾರಣಕ್ಕೂ ಈ ಸರ್ಕಾರ ಉಳಿಯೋದಿಲ್ಲ. ಕೆ.ಆರ್‌ ಪೇಟೆ ಶಾಸಕರು ಗೆದ್ದು ಮೂರು ತಿಂಗಳಾದರೂ ಕೂಡ ಕೆಲಸ ಮಾಡಿಲ್ಲ ಎಂದುಕೊಳ್ಳಬೇಡಿ. ನೀವು ಅವರನ್ನು ಒಳ್ಳೆಯವರು ಎಂದು ಗೆಲ್ಲಿಸಿದ್ದೀರಿ. ನೀವು ಅವರ ಮೇಲೆ ಇಟ್ಟಿರುವಷ್ಟೇ ಪ್ರೀತಿಯನ್ನು ಮಂಜಣ್ಣ ಕೂಡ ಇಟ್ಟುಕೊಂಡಿದ್ದಾರೆ. ನಿಮ್ಮ ಕೆಲಸಗಳನ್ನು ಶಾಸಕರ ಜೊತೆ ನಿಂತು ಮಾಡಿಸುವ ಜವಬ್ದಾರಿ ನನ್ನ ಮೇಲಿದೆ. ಐದಾರು ತಿಂಗಳು ಶಾಸಕರಿಗೆ ಸಮಯ ಕೊಡಿ ಎಂದು ಹೇಳಿದ್ದಾರೆ.
ಇನ್ನು ಜೆಡಿಎಸ್‌ ಶಾಸಕ ಮಂಜು ಅವರು ಮಾತನಾಡಿದ್ದು, ನಮ್ಮ ತಾಲೂಕು ಅಭಿವೃದ್ಧಿ ಆಗಬೇಕಾದರೆ ಕುಮಾರಣ್ಣನಿಗೆ ಅವಕಾಶ ಸಿಗಬೇಕು. ಅವರಿಂದ ಮಾತ್ರ ಅಭಿವೃದ್ಧಿ ಸಾಧ್ಯವಾಗಲಿದೆ. ಹಿಂದಿನ ಶಾಸಕರು ಅವರು ಮುಖ್ಯಮಂತ್ರಿಯಾಗಿದ್ದಾಗ ಒಂದು ವರ್ಷಗಳ ಕಾಲ ಅನುದಾನವನ್ನು ಗುದ್ದಲಿ ಪೂಜೆ ಮಾಡಿಕೊಂಡೇ ಕಳೆದಿದ್ದಾರೆ. ಕುಮಾರಸ್ವಾಮಿಯವರಿಗೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಇದೆ. ಇದಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇವೆ. ಹಿಂದೆ ಪಂಚರತ್ನ ಯೋಜನೆ ಜಾರಿಗೆ ಅವಕಾಶ ಸಿಗಲಿಲ್ಲ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ.
lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago