ರಾಜಕೀಯ

ಮೇ ಬಳಿಕ ರಾಜ್ಯ ಸರ್ಕಾರ ಪಥನ ಆಗೋದು ಗ್ಯಾರಂಟಿ : ಎಚ್‌ಡಿಕೆ

ಮಂಡ್ಯ : ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಇರೋದಿಲ್ಲ. ಮೇ ಬಳಿಕ ರಾಜ್ಯ ಸರ್ಕಾರ ಪಥನವಾಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ದೇವಸ್ಥಾನವೊಂದರ ಜೀರ್ಣೋದ್ಧಾರ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಮಾತನಾಡಿರುವ ಕುಮಾರಸ್ವಾಮಿ ಅವರು ನಾನು ಜನರ ಧ್ವನಿಯಾಗಿರುತ್ತೇನೆ ಎಂದು ಭರವಸೆ ನೀಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಇರುವುದಿಲ್ಲ ಮೇ ತಿಂಗಳ ಬಳಿಕ ಕೈ ಸರ್ಕಾರ ಉರುಳಿ ಬೀಳುವುದು ಗ್ಯಾರಂಟಿ. ಯಾವುದೇ ಕಾರಣಕ್ಕೂ ಈ ಸರ್ಕಾರ ಉಳಿಯೋದಿಲ್ಲ. ಕೆ.ಆರ್‌ ಪೇಟೆ ಶಾಸಕರು ಗೆದ್ದು ಮೂರು ತಿಂಗಳಾದರೂ ಕೂಡ ಕೆಲಸ ಮಾಡಿಲ್ಲ ಎಂದುಕೊಳ್ಳಬೇಡಿ. ನೀವು ಅವರನ್ನು ಒಳ್ಳೆಯವರು ಎಂದು ಗೆಲ್ಲಿಸಿದ್ದೀರಿ. ನೀವು ಅವರ ಮೇಲೆ ಇಟ್ಟಿರುವಷ್ಟೇ ಪ್ರೀತಿಯನ್ನು ಮಂಜಣ್ಣ ಕೂಡ ಇಟ್ಟುಕೊಂಡಿದ್ದಾರೆ. ನಿಮ್ಮ ಕೆಲಸಗಳನ್ನು ಶಾಸಕರ ಜೊತೆ ನಿಂತು ಮಾಡಿಸುವ ಜವಬ್ದಾರಿ ನನ್ನ ಮೇಲಿದೆ. ಐದಾರು ತಿಂಗಳು ಶಾಸಕರಿಗೆ ಸಮಯ ಕೊಡಿ ಎಂದು ಹೇಳಿದ್ದಾರೆ.
ಇನ್ನು ಜೆಡಿಎಸ್‌ ಶಾಸಕ ಮಂಜು ಅವರು ಮಾತನಾಡಿದ್ದು, ನಮ್ಮ ತಾಲೂಕು ಅಭಿವೃದ್ಧಿ ಆಗಬೇಕಾದರೆ ಕುಮಾರಣ್ಣನಿಗೆ ಅವಕಾಶ ಸಿಗಬೇಕು. ಅವರಿಂದ ಮಾತ್ರ ಅಭಿವೃದ್ಧಿ ಸಾಧ್ಯವಾಗಲಿದೆ. ಹಿಂದಿನ ಶಾಸಕರು ಅವರು ಮುಖ್ಯಮಂತ್ರಿಯಾಗಿದ್ದಾಗ ಒಂದು ವರ್ಷಗಳ ಕಾಲ ಅನುದಾನವನ್ನು ಗುದ್ದಲಿ ಪೂಜೆ ಮಾಡಿಕೊಂಡೇ ಕಳೆದಿದ್ದಾರೆ. ಕುಮಾರಸ್ವಾಮಿಯವರಿಗೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಇದೆ. ಇದಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇವೆ. ಹಿಂದೆ ಪಂಚರತ್ನ ಯೋಜನೆ ಜಾರಿಗೆ ಅವಕಾಶ ಸಿಗಲಿಲ್ಲ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ.
lokesh

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 hour ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

1 hour ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

1 hour ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

2 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

2 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

2 hours ago