ರಾಜಕೀಯ

ಎಚ್‌ಡಿಕೆ ಟ್ವೀಟ್ ಗೆ ಉತ್ತರಿಸುವ ಅಗತ್ಯ ಇಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಹರಿಹಾಯ್ದಿದ್ದಾರೆ. ಇನ್ನು ಈ ಕುರಿತಾಗಿ ಪ್ರತಿಕ್ರಿಯಿಸಿರುವ ಸಿಎಂ
ಸಿದ್ದರಾಮಯ್ಯನವರು, ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್ ಮಾಡಿದರೂ ಅವುಗಳಿಗೆ ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಕುಮಾರಸ್ವಾಮಿಯವರು ತಮ್ಮ ವಿರುದ್ಧ ಮಾಡಿರುವ ಸರಣಿ ಟ್ವೀಟ್ ಗಳ ಬಗ್ಗೆ ಮಾತನಾಡಿದ ಅವರು, ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಹಾಗೂ ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೇ ಹೇಳಿದಂತೆ ಈಗಲೂ ಹೇಳುತ್ತಿದ್ದೇನೆ. ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ. ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ. ಕುಮಾರಸ್ವಾಮಿಯವರು ನೂರು ಟ್ವೀಟ್ ಮಾಡಿದರು ಅದಕ್ಕೆ ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಎಚ್‌ಡಿಕೆ ಅವರ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಹರಿಹಾಯ್ದಿದ್ದರು.

ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರಿಗೆ ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ಎಂದು ಪ್ರಶ್ನಿಸಿದ್ದರು. ನಿಮಗಾಗಿರುವ ಧನದಹದ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೆ ? ಮಾನಸಿಕ ಸ್ವಾಸ್ತ್ಯಕ್ಕಿಂತ ಇದು ಮಾರಕ ಮನೋರೋಗವಲ್ಲವೇ ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಖಾಯಿಲೆಗೆ ತುತ್ತಾದರೆ ನಾಡಿನ ಪಾಡೇನು ? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದರು.

ಇನ್ನು ಪೆನ್ ಡ್ರೈವ್ ವಿಚಾರವಾಗಿ ಟ್ವೀಟ್ ಮಾಡಿದ್ದ ಎಚ್‌ಡಿಕೆ, ಪೆನ್ ಡ್ರೈವ್ ಕಳೆದಿಲ್ಲ, ಅದನ್ನು ತೋರಿಸಿದೊಡನೆ ನನ್ನ ಬಳಿಗೆ ಓಡಿ ಬಂದವರ ಪಟ್ಟಿಯನ್ನು ಕೊಡಲೇ ಸಿಎಂ ಸಾಹೇಬರೇ, ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತದೆ. ___ ಗುಂಪಾಗಿ ಬರುತ್ತವೆ. ಬಿಟ್ಟ ಸ್ಥಳ ಭರ್ತಿ ಮಾಡಿಸುವ ಕೆಲಸ ನನ್ನಿಂದ ನೀವು ಮಾಡಿಸುವುದಿಲ್ಲ. ಎಂದು ನಂಬಿದ್ದೇನೆ ಎಂದು ಕೌಂಟರ್ ಕೊಟ್ಟಿದ್ದರು.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

1 hour ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

1 hour ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

1 hour ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

1 hour ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

1 hour ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago