ರಾಜಕೀಯ

ಈಗ ನಾನೇ ವಿಪಕ್ಷ ನಾಯಕ : ಯತ್ನಾಳ್

ವಿಜಯಪುರ : ಹೈಕಮಾಂಡ್‌ ನಿಂದ ವಿಪಕ್ಷ ನಾಯಕನ ನೇಮಕವಾಗಿದ್ದರೂ ನಾನೇ ವಿಪಕ್ಷ ನಾಯಕ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ವಿಜಯಪುರದಲ್ಲಿ ನಡೆದ ದಾನಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಷಣ ಮಾಡುವ ವೇಳೆ ಯತ್ನಾಳ್‌ ಅವರು ಈ ರೀತಿಯ ಮಾತುಗಳನ್ನಾಡಿದ್ದಾರೆ.

ಸೋಮವಾರದಿಂದ ನಮ್ಮ ದಂಗಲ್‌ ಶುರುವಾಗುತ್ತೆ. ಆಗ ಯಾರು ನಿಜವಾದ ವಿಪಕ್ಷ ನಾಯಕ ಅಂತ ಫಿಕ್ಸ್‌ ಮಾಡ್ತೀವಿ. ಈಗ ನಾನೇ ವಿಪಕ್ಷ ನಾಯಕ. ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನ ಸೇಲ್‌ ಆಗಿದೆಯಾ ? ಯಾರಾದರೂ ಏನಾದರೂ ಕೊಟ್ಟು ತಗೊಂಡು ಮಾಡಿದ್ರೆ ನಾವು ಒಪ್ಪುತ್ತೇವೆ ಎಂದು ಹೇಳುವ ಮೂಲಕ ಯತ್ನಾಳ್‌ ಅವರು ರಾಜಕೀಯ ವಲಯದಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ.

ಮುಂದುವರೆದು ಮಾತನಾಡಿದ ಅವರು ನೀವೆಲ್ಲಾ ಒಟ್ಟಾಗಿರಿ ಒಂದಿಲ್ಲೊಂದು ದಿನ ಕರ್ನಾಟಕ ನಮ್ಮ ಕೈಯಲ್ಲಿ ಬರುತ್ತೆ. ಯಾರಿಂದಲೂ ತಪ್ಪಿಸಲು ಆಗಲ್ಲ. ಲೂಟಿ ಮಾಡಿ ದುಡ್ಡು ಮಾಡಿಕೊಂಡಿರಬಹುದು. ನನ್ನ ಜನ ಬೆಂಬಲದ ಮುಂದೆ ರೊಕ್ಕ ಆಟ ನಡೆಯಲ್ಲ. ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೈ ತಪ್ಪಿದ್ದಕ್ಕೆ ಕೆಲವರಿಗೆ ಖುಷಿ ಆಗಿದೆ. ಅದಕ್ಕೆ ಹೋಗಿ ಹಾರ ಹಾಕಿ ಹಲ್ಲು ಕಿಸಿದು ನೀವು ರಾಜ್ಯಾಧ್ಯಕ್ಷ ಆಗಿದ್ದು ಬಹಳ ಖುಷಿ ಆಯ್ತು ಅಂತಿದ್ದಾರೆ.

ನನಗೆ ಹೈ ಕಮಾಂಡ್‌ ನಿಂದ ಫೋನ್‌ ಬಂದಿದೆ. ಹೈಕಮಾಂಡ್‌ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕಿಂತ ದೊಡ್ಡ ಹುದ್ದೆ ಕೊಟ್ಟರೆ ಏನು ಮಾಡ್ತಾರೆ ಮಕ್ಕಳು ? ನನಗೆ ಅವರನ್ನು ಕಂಟ್ರೋಲ್‌ ಮಾಡುವ ಹುದ್ದೆ ಕೊಟ್ಟರೆ ಏನು ಮಾಡ್ತಾರೆ ? ಕರ್ನಾಟಕದಲ್ಲಿ ಹಿಂಗೆ ನಡೆಯಬೇಕು ಎನ್ನುವ ಪರಿಸ್ಥಿತಿ ಬಂದ್ರೆ ಏನು ಮಾಡುತ್ತಾರೆ ಎಂದು ಸ್ವಪಕ್ಷೀಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

lokesh

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

2 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

3 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

4 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

4 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

5 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

5 hours ago