ವಿಜಯಪುರ : ಹೈಕಮಾಂಡ್ ನಿಂದ ವಿಪಕ್ಷ ನಾಯಕನ ನೇಮಕವಾಗಿದ್ದರೂ ನಾನೇ ವಿಪಕ್ಷ ನಾಯಕ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ನಡೆದ ದಾನಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಷಣ ಮಾಡುವ ವೇಳೆ ಯತ್ನಾಳ್ ಅವರು ಈ ರೀತಿಯ ಮಾತುಗಳನ್ನಾಡಿದ್ದಾರೆ.
ಸೋಮವಾರದಿಂದ ನಮ್ಮ ದಂಗಲ್ ಶುರುವಾಗುತ್ತೆ. ಆಗ ಯಾರು ನಿಜವಾದ ವಿಪಕ್ಷ ನಾಯಕ ಅಂತ ಫಿಕ್ಸ್ ಮಾಡ್ತೀವಿ. ಈಗ ನಾನೇ ವಿಪಕ್ಷ ನಾಯಕ. ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನ ಸೇಲ್ ಆಗಿದೆಯಾ ? ಯಾರಾದರೂ ಏನಾದರೂ ಕೊಟ್ಟು ತಗೊಂಡು ಮಾಡಿದ್ರೆ ನಾವು ಒಪ್ಪುತ್ತೇವೆ ಎಂದು ಹೇಳುವ ಮೂಲಕ ಯತ್ನಾಳ್ ಅವರು ರಾಜಕೀಯ ವಲಯದಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ.
ಮುಂದುವರೆದು ಮಾತನಾಡಿದ ಅವರು ನೀವೆಲ್ಲಾ ಒಟ್ಟಾಗಿರಿ ಒಂದಿಲ್ಲೊಂದು ದಿನ ಕರ್ನಾಟಕ ನಮ್ಮ ಕೈಯಲ್ಲಿ ಬರುತ್ತೆ. ಯಾರಿಂದಲೂ ತಪ್ಪಿಸಲು ಆಗಲ್ಲ. ಲೂಟಿ ಮಾಡಿ ದುಡ್ಡು ಮಾಡಿಕೊಂಡಿರಬಹುದು. ನನ್ನ ಜನ ಬೆಂಬಲದ ಮುಂದೆ ರೊಕ್ಕ ಆಟ ನಡೆಯಲ್ಲ. ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೈ ತಪ್ಪಿದ್ದಕ್ಕೆ ಕೆಲವರಿಗೆ ಖುಷಿ ಆಗಿದೆ. ಅದಕ್ಕೆ ಹೋಗಿ ಹಾರ ಹಾಕಿ ಹಲ್ಲು ಕಿಸಿದು ನೀವು ರಾಜ್ಯಾಧ್ಯಕ್ಷ ಆಗಿದ್ದು ಬಹಳ ಖುಷಿ ಆಯ್ತು ಅಂತಿದ್ದಾರೆ.
ನನಗೆ ಹೈ ಕಮಾಂಡ್ ನಿಂದ ಫೋನ್ ಬಂದಿದೆ. ಹೈಕಮಾಂಡ್ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕಿಂತ ದೊಡ್ಡ ಹುದ್ದೆ ಕೊಟ್ಟರೆ ಏನು ಮಾಡ್ತಾರೆ ಮಕ್ಕಳು ? ನನಗೆ ಅವರನ್ನು ಕಂಟ್ರೋಲ್ ಮಾಡುವ ಹುದ್ದೆ ಕೊಟ್ಟರೆ ಏನು ಮಾಡ್ತಾರೆ ? ಕರ್ನಾಟಕದಲ್ಲಿ ಹಿಂಗೆ ನಡೆಯಬೇಕು ಎನ್ನುವ ಪರಿಸ್ಥಿತಿ ಬಂದ್ರೆ ಏನು ಮಾಡುತ್ತಾರೆ ಎಂದು ಸ್ವಪಕ್ಷೀಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…