ರಾಜಕೀಯ

ಕಾಂಗ್ರೆಸ್ ಕಿತ್ತೊಗೆಯುವುದೇ ನಮ್ಮ ಗುರಿ : ಆರ್ ಅಶೋಕ್

ಬೆಂಗಳೂರು : ವಿಪಕ್ಷ ನಾಯಕನಾಗಿ ಗದ್ದುಗೆ ಏರುತ್ತಿದ್ದಂತೆಯೇ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಪಕ್ಷ ನಾಯಕನ ಆಯ್ಕೆಯ ಬಳಿಕ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಹೈ ಕಮಾಂಡ್ 28 ಸ್ಥಾನ ಗೆಲ್ಲುವ ಗುರಿಯನ್ನು ಕೊಟ್ಟಿದೆ.ಅದರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವುದೇ ನಮ್ಮ ಮೊದಲ ಗುರಿ ಎಂದಿದ್ದಾರೆ.

ಮುಖ್ಯಮಂತ್ರಿ ಮತ್ತವರ ಮಗ ಇಬ್ಬರೂ ಕೂಡ ವರ್ಗಾವಣೆ ದಂದೆಯಲ್ಲಿ ಮುಳುಗಿದ್ದಾರೆ.ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ರೈತರಿಗೆ ಹೆಚ್ಚಿನ ಬರ ಪರಿಹಾರ ನೀಡಿದ್ದೇವೆ.ಆದರೆ ಈಗಿರುವ ಸರ್ಕಾರ ಕೇಂದ್ರದತ್ತ ಬೆರಳು ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈಗಾಗಲೇ ಸರ್ಕಾರದ ಖಜಾನೆ ಖಾಲಿಯಾಗಿದೆ.ರೈತರಿಗೆ ಬರ ಪರಿಹಾರದ ಹಣ ನೀಡಲು ಆಗುತ್ತಿಲ್ಲ,ಆದರೆ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಬಾರಿ ಪೈಪೋಟಿ ನಡೆಯುತ್ತಿದೆ ಎಂದಿದ್ದಾರೆ.

ಬಿಜೆಪಿ ಶಾಸಕರಿಗೆ ನೀಡುವ ಅನುದಾನವನ್ನು ಕಡಿತಗೋಳಿಸಿದ್ದಾರೆ, ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರೇ ಅಳಲು ತೋಡಿಕೊಂಡಿದ್ದಾರೆ.ನಾವು ಯಾರ ಬಗ್ಗೆಯೂ ದ್ವೇಷ ಪಡುವುದಿಲ್ಲ,ಎಲ್ಲರ ವಿಶ್ವಾಸ ಮತ್ತು ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸೇರಿ ರಾಜ್ಯ ಸರ್ಕಾರದ ವಿರುದ್ಧ ಹೋರಾಡುತ್ತೇವೆ.ಪ್ರಭಲ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ.ಇಂದಿರಾ ಗಾಂಧಿ ದುರಾಡಳಿತ ಮತ್ತು ತುರ್ತು ಪರಿಸ್ಥಿತಿಯ ವೇಳೆಯಲ್ಲಿ ಸೆರೆಮನೆವಾಸ ಅನುಭವಿಸುತ್ತಿದ್ದೆ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದು ಕಿ.ಮೀ ಕೂಡ ರಸ್ತೆ ಮಾಡಿಲ್ಲ, ಒಂದು ಶಾಲೆಯನ್ನೂ ಸಹ ನಿರ್ಮಾಣ ಮಾಡಿಲ್ಲ.ಸರ್ಕಾರ ಬದುಕಿದೆಯೋ ಸತ್ತಿದೆಯೋ ತಿಳಿಯುತ್ತಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

lokesh

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

53 mins ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

1 hour ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

1 hour ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

1 hour ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

2 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

2 hours ago