ಬೆಂಗಳೂರು : ವಿಪಕ್ಷ ನಾಯಕನಾಗಿ ಗದ್ದುಗೆ ಏರುತ್ತಿದ್ದಂತೆಯೇ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ವಿಪಕ್ಷ ನಾಯಕನ ಆಯ್ಕೆಯ ಬಳಿಕ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಹೈ ಕಮಾಂಡ್ 28 ಸ್ಥಾನ ಗೆಲ್ಲುವ ಗುರಿಯನ್ನು ಕೊಟ್ಟಿದೆ.ಅದರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವುದೇ ನಮ್ಮ ಮೊದಲ ಗುರಿ ಎಂದಿದ್ದಾರೆ.
ಮುಖ್ಯಮಂತ್ರಿ ಮತ್ತವರ ಮಗ ಇಬ್ಬರೂ ಕೂಡ ವರ್ಗಾವಣೆ ದಂದೆಯಲ್ಲಿ ಮುಳುಗಿದ್ದಾರೆ.ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ರೈತರಿಗೆ ಹೆಚ್ಚಿನ ಬರ ಪರಿಹಾರ ನೀಡಿದ್ದೇವೆ.ಆದರೆ ಈಗಿರುವ ಸರ್ಕಾರ ಕೇಂದ್ರದತ್ತ ಬೆರಳು ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈಗಾಗಲೇ ಸರ್ಕಾರದ ಖಜಾನೆ ಖಾಲಿಯಾಗಿದೆ.ರೈತರಿಗೆ ಬರ ಪರಿಹಾರದ ಹಣ ನೀಡಲು ಆಗುತ್ತಿಲ್ಲ,ಆದರೆ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಬಾರಿ ಪೈಪೋಟಿ ನಡೆಯುತ್ತಿದೆ ಎಂದಿದ್ದಾರೆ.
ಬಿಜೆಪಿ ಶಾಸಕರಿಗೆ ನೀಡುವ ಅನುದಾನವನ್ನು ಕಡಿತಗೋಳಿಸಿದ್ದಾರೆ, ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರೇ ಅಳಲು ತೋಡಿಕೊಂಡಿದ್ದಾರೆ.ನಾವು ಯಾರ ಬಗ್ಗೆಯೂ ದ್ವೇಷ ಪಡುವುದಿಲ್ಲ,ಎಲ್ಲರ ವಿಶ್ವಾಸ ಮತ್ತು ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸೇರಿ ರಾಜ್ಯ ಸರ್ಕಾರದ ವಿರುದ್ಧ ಹೋರಾಡುತ್ತೇವೆ.ಪ್ರಭಲ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ.ಇಂದಿರಾ ಗಾಂಧಿ ದುರಾಡಳಿತ ಮತ್ತು ತುರ್ತು ಪರಿಸ್ಥಿತಿಯ ವೇಳೆಯಲ್ಲಿ ಸೆರೆಮನೆವಾಸ ಅನುಭವಿಸುತ್ತಿದ್ದೆ ಎಂದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದು ಕಿ.ಮೀ ಕೂಡ ರಸ್ತೆ ಮಾಡಿಲ್ಲ, ಒಂದು ಶಾಲೆಯನ್ನೂ ಸಹ ನಿರ್ಮಾಣ ಮಾಡಿಲ್ಲ.ಸರ್ಕಾರ ಬದುಕಿದೆಯೋ ಸತ್ತಿದೆಯೋ ತಿಳಿಯುತ್ತಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…