ರಾಜಕೀಯ

ರೈತರ ಹಣ ತಿಂದ್ರೆ ಪ್ಯಾರಾಲಿಸಿಸ್‌ ಬರುತ್ತೆ : ಲಕ್ಷ್ಮಣ ಸವದಿ

ಬೆಳಗಾವಿ : ರೈತರು ದೇವರ ಸಮಾನ. ಶಿವಸ್ವರೂಪಿಗಳು ಅವರ ಹಣ ತಿಂದ್ರೆ ಪ್ಯಾರಾಲಿಸಿಸ್‌ ಬರುತ್ತೆ ಅಂತ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಮಾತನಾಡಿರುವ ಶಾಸಕ ಲಕ್ಷ್ಮಣ ಸವದಿ ರೈತರು ದೇವರ ಸಮಾನ. ಶಿವಸ್ವರೂಪಿಗಳು ಅವರ ಹಣ ತಿಂದ್ರೆ ಪ್ಯಾರಲಿಸಿಸ್‌ ಬರುತ್ತೆ. ರೈತರ ಹಣ ತಿಂದ ಮಾಲಿಕರು ಉದ್ದಾರ ಆಗಲ್ಲ. ಅನ್ನದಾತರಿಗೆ ಮೋಸ ಮಾಡಬೇಡಿ ಎಂದಿದ್ದಾರೆ.
ನಿಯಮ  69 ರ ಅಡಿಯಲ್ಲಿ ಕಬ್ಬು ಕಾರ್ಖಾನೆಗಳಲ್ಲಿ ಆಧುನಿಕ ತೂಕದ ಯಂತ್ರಗಳನ್ನು  ಅಳವಡಿಸುವ ಬಗ್ಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತು ಆರಂಭಿಸುತ್ತಿದ್ದಂತೆಯೇ ವಿಪಕ್ಷ ಶಾಸಕರು ಸದನದ ಭಾವಿಯಲ್ಲಿ ನಿಂತು ಧಿಕ್ಕಾರ ಕೂಗಿದರು. ಇದಕ್ಕೆ ಪ್ರತಿಯಾಗಿ ಮಾತನಾಡಿದ ಸವದಿ ನೀವು ಕಬ್ಬು ಬೆಳೆಗಾರರ ವಿರೋಧಿಗಳು, ಹೊರಗೆ ಹೋದರೆ ಜನ ನಿಮಗೆ ಕಬ್ಬು ತಗೊಂಡು ಹೊಡಿತಾರೆ ಎಂದು ಎಚ್ಚರಿಸಿದರು.
ಇನ್ನು ತಮ್ಮ ಚರ್ಚೆಗೆ ಅಡ್ಡಿ ಪಡಿಸಿದ ಶಿವಮೊಗ್ಗ ನಗರದ ಶಾಸಕ ಚನ್ನಬಸಪ್ಪ ಅವರ ವಿರುದ್ಧ ಸಿಟ್ಟಾದ ಸವದಿ, ಶಿವಮೊಗ್ಗದವರು ಉತ್ತರ ಕರ್ನಾಟಕ ವಿರೋಧಿಗಳು. ನಿನ್ನ ಯಾರು ಕೀಲಿ ಕೊಟ್ಟು ಇಲ್ಲಿಗೆ ಕೂಗಲು ಕಳಿಸಿದ್ದಾರೆ ಅಂತಾ ಗೊತ್ತಿದೆ. ಕೂಗೂ ಜೋರಾಗಿ ಕೂಗು ಎಂದು ಕಿಡಿ ಕಾರಿದರು.
lokesh

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

10 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

24 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

24 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

24 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

24 hours ago