ರಾಜಕೀಯ

ರೈತರ ಹಣ ತಿಂದ್ರೆ ಪ್ಯಾರಾಲಿಸಿಸ್‌ ಬರುತ್ತೆ : ಲಕ್ಷ್ಮಣ ಸವದಿ

ಬೆಳಗಾವಿ : ರೈತರು ದೇವರ ಸಮಾನ. ಶಿವಸ್ವರೂಪಿಗಳು ಅವರ ಹಣ ತಿಂದ್ರೆ ಪ್ಯಾರಾಲಿಸಿಸ್‌ ಬರುತ್ತೆ ಅಂತ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಮಾತನಾಡಿರುವ ಶಾಸಕ ಲಕ್ಷ್ಮಣ ಸವದಿ ರೈತರು ದೇವರ ಸಮಾನ. ಶಿವಸ್ವರೂಪಿಗಳು ಅವರ ಹಣ ತಿಂದ್ರೆ ಪ್ಯಾರಲಿಸಿಸ್‌ ಬರುತ್ತೆ. ರೈತರ ಹಣ ತಿಂದ ಮಾಲಿಕರು ಉದ್ದಾರ ಆಗಲ್ಲ. ಅನ್ನದಾತರಿಗೆ ಮೋಸ ಮಾಡಬೇಡಿ ಎಂದಿದ್ದಾರೆ.
ನಿಯಮ  69 ರ ಅಡಿಯಲ್ಲಿ ಕಬ್ಬು ಕಾರ್ಖಾನೆಗಳಲ್ಲಿ ಆಧುನಿಕ ತೂಕದ ಯಂತ್ರಗಳನ್ನು  ಅಳವಡಿಸುವ ಬಗ್ಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತು ಆರಂಭಿಸುತ್ತಿದ್ದಂತೆಯೇ ವಿಪಕ್ಷ ಶಾಸಕರು ಸದನದ ಭಾವಿಯಲ್ಲಿ ನಿಂತು ಧಿಕ್ಕಾರ ಕೂಗಿದರು. ಇದಕ್ಕೆ ಪ್ರತಿಯಾಗಿ ಮಾತನಾಡಿದ ಸವದಿ ನೀವು ಕಬ್ಬು ಬೆಳೆಗಾರರ ವಿರೋಧಿಗಳು, ಹೊರಗೆ ಹೋದರೆ ಜನ ನಿಮಗೆ ಕಬ್ಬು ತಗೊಂಡು ಹೊಡಿತಾರೆ ಎಂದು ಎಚ್ಚರಿಸಿದರು.
ಇನ್ನು ತಮ್ಮ ಚರ್ಚೆಗೆ ಅಡ್ಡಿ ಪಡಿಸಿದ ಶಿವಮೊಗ್ಗ ನಗರದ ಶಾಸಕ ಚನ್ನಬಸಪ್ಪ ಅವರ ವಿರುದ್ಧ ಸಿಟ್ಟಾದ ಸವದಿ, ಶಿವಮೊಗ್ಗದವರು ಉತ್ತರ ಕರ್ನಾಟಕ ವಿರೋಧಿಗಳು. ನಿನ್ನ ಯಾರು ಕೀಲಿ ಕೊಟ್ಟು ಇಲ್ಲಿಗೆ ಕೂಗಲು ಕಳಿಸಿದ್ದಾರೆ ಅಂತಾ ಗೊತ್ತಿದೆ. ಕೂಗೂ ಜೋರಾಗಿ ಕೂಗು ಎಂದು ಕಿಡಿ ಕಾರಿದರು.
lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago