ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಪೋಸ್ಟರ್ ವಾರ್ ಮುಂದುವರಿದಿದೆ.
ಕರೆಂಟ್ ಕಳ್ಳ ಖ್ಯಾತಿಯ ಎಚ್.ಡಿ.ಕೆ ನಿರ್ಮಾಣದ ‘ಪೆನ್ ಡ್ರೈವ್ ಬ್ರದರ್’ ಚಿತ್ರ ಬಿಡುಗಡೆಯಾಗಲಿದೆ ಎಂದು ಪೋಸ್ಟರ್ ಅಂಟಿಸುವ ಮೂಲಕ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಕೆಣಕಿದಂತಾಗಿದೆ.
ಬೆಂಗಳೂರಿನ ರಾಜಾಜಿನಗರ ರಸ್ತೆ, ಶಿವಾನಂದ ಸರ್ಕಲ್,ಶೇಷಾದ್ರಿಪುರಂ ರಸ್ತೆ, ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪೆನ್ ಡ್ರೈವ್ ಬ್ರದರ್ ಚಿತ್ರ ಬಿಡುಗಡೆ ಪೋಸ್ಟರ್ ಅಂಟಿಸಲಾಗಿದೆ. ಇದು ಮತ್ತೊಂದು ಪೋಸ್ಟರ್ ವಾರ್ ಗೆ ಮುನ್ನುಡಿ ಬರೆದಿದೆ. ಈ ಪೋಸ್ಟರನ್ನು ಯಾರು ಅಂಟಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ.
ಇನ್ನು ಈ ಪೋಸ್ಟರ್ ನಲ್ಲಿ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಶೀಘ್ರವೇ ಬಿಡುಗಡೆಯಾಗಲಿದೆ. *ರಾಧಾ* *ಮಾರ* * ಬ್ಲೂ ಬಾಯ್ಸ್ * ಚಿತ್ರ ಮಂದಿರಗಳಲ್ಲಿ. 68.000 ರೂ. ವೆಚ್ಚದಲ್ಲಿ ಪ್ರಾಮಾಣಿಕ ಕರೆಂಟ್ ಕಳ್ಳರ ನಿರ್ದೇಶನದಲ್ಲಿ ತಯಾರಾಗಿರುವ ಕರೆಂಟ್ ಕಳ್ಳ ಖ್ಯಾತಿಯ ಎಚ್. ಡಿ.ಕೆ ನಿರ್ಮಾಣದ ‘ಪೆನ್ ಡ್ರೈವ್ ಬ್ರದರ್’
ಬರೀ ಟೀಸರ್ ಗೆ ಇಷ್ಟೊಂದು ಟೆನ್ಶನ್ ಆದ್ರೆ ಹೆಂಗೆ ? ಪಿಚ್ಚರ್ ಇನ್ನೂ ಬಾಕಿ ಇದೆ… ಎಂದು ಬರೆಯಲಾಗಿದೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪ ಅಲಂಕಾರ ಮಾಡಲು ಬೀದಿ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದ ಆರೋಪದಡಿ ಎಫ್ಐಆರ್ ದಾಖಲಾಗಿತ್ತು.
ಇನ್ನು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿ ಕೊಂಡಿದ್ದರ ಕುರಿತು ಕಾಂಗ್ರೆಸ್ ಎಚ್ ಡಿಕೆ ವಿರುದ್ಧ ದೊಡ್ಡಮಟ್ಟದಲ್ಲಿಯೇ ಟಿಕಾ ಪ್ರಹಾರ ಮಾಡಿತ್ತು. ಅಲ್ಲದೇ ಕುಮಾರಸ್ವಾಮಿ ಅವರನ್ನು ಕರೆಂಟ್ ಕಳ್ಳ ಎಂದು ಪೋಸ್ಟರ್ ಕೂಡ ಅಂಟಿಸಲಾಗಿತ್ತು.ಈ ಕುರಿತು ಕುಮಾರಸ್ವಾಮಿ ಅವರು ಕೂಡ ಟಾಂಗ್ ನೀಡಿದ್ದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…