ರಾಜಕೀಯ

ಶೀಘ್ರವೇ ಬಿಡುಗಡೆಯಾಗಲಿದೆ ಪೆನ್ ಡ್ರೈವ್ ಬ್ರದರ್ ಚಿತ್ರ : ಎಚ್.ಡಿ.ಕೆ ವಿರುದ್ಧ ಮತ್ತೊಂದು ಪೋಸ್ಟರ್ ವಾರ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಪೋಸ್ಟರ್ ವಾರ್ ಮುಂದುವರಿದಿದೆ.

ಕರೆಂಟ್ ಕಳ್ಳ ಖ್ಯಾತಿಯ ಎಚ್.ಡಿ.ಕೆ ನಿರ್ಮಾಣದ ‘ಪೆನ್ ಡ್ರೈವ್ ಬ್ರದರ್’ ಚಿತ್ರ ಬಿಡುಗಡೆಯಾಗಲಿದೆ ಎಂದು ಪೋಸ್ಟರ್ ಅಂಟಿಸುವ ಮೂಲಕ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಕೆಣಕಿದಂತಾಗಿದೆ.

ಬೆಂಗಳೂರಿನ ರಾಜಾಜಿನಗರ ರಸ್ತೆ, ಶಿವಾನಂದ ಸರ್ಕಲ್,ಶೇಷಾದ್ರಿಪುರಂ ರಸ್ತೆ, ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪೆನ್ ಡ್ರೈವ್ ಬ್ರದರ್ ಚಿತ್ರ ಬಿಡುಗಡೆ ಪೋಸ್ಟರ್ ಅಂಟಿಸಲಾಗಿದೆ. ಇದು ಮತ್ತೊಂದು ಪೋಸ್ಟರ್ ವಾರ್ ಗೆ ಮುನ್ನುಡಿ ಬರೆದಿದೆ. ಈ ಪೋಸ್ಟರನ್ನು ಯಾರು ಅಂಟಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಇನ್ನು ಈ ಪೋಸ್ಟರ್ ನಲ್ಲಿ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಶೀಘ್ರವೇ ಬಿಡುಗಡೆಯಾಗಲಿದೆ. *ರಾಧಾ* *ಮಾರ*  * ಬ್ಲೂ ಬಾಯ್ಸ್ * ಚಿತ್ರ ಮಂದಿರಗಳಲ್ಲಿ. 68.000 ರೂ. ವೆಚ್ಚದಲ್ಲಿ ಪ್ರಾಮಾಣಿಕ ಕರೆಂಟ್ ಕಳ್ಳರ ನಿರ್ದೇಶನದಲ್ಲಿ ತಯಾರಾಗಿರುವ ಕರೆಂಟ್ ಕಳ್ಳ ಖ್ಯಾತಿಯ ಎಚ್. ಡಿ.ಕೆ ನಿರ್ಮಾಣದ ‘ಪೆನ್ ಡ್ರೈವ್ ಬ್ರದರ್’

ಬರೀ ಟೀಸರ್ ಗೆ ಇಷ್ಟೊಂದು ಟೆನ್ಶನ್ ಆದ್ರೆ ಹೆಂಗೆ ? ಪಿಚ್ಚರ್ ಇನ್ನೂ ಬಾಕಿ ಇದೆ… ಎಂದು ಬರೆಯಲಾಗಿದೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪ ಅಲಂಕಾರ ಮಾಡಲು ಬೀದಿ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದ ಆರೋಪದಡಿ ಎಫ್ಐಆರ್ ದಾಖಲಾಗಿತ್ತು.

ಇನ್ನು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿ ಕೊಂಡಿದ್ದರ ಕುರಿತು ಕಾಂಗ್ರೆಸ್ ಎಚ್ ಡಿಕೆ ವಿರುದ್ಧ ದೊಡ್ಡಮಟ್ಟದಲ್ಲಿಯೇ ಟಿಕಾ ಪ್ರಹಾರ ಮಾಡಿತ್ತು. ಅಲ್ಲದೇ ಕುಮಾರಸ್ವಾಮಿ ಅವರನ್ನು ಕರೆಂಟ್ ಕಳ್ಳ ಎಂದು ಪೋಸ್ಟರ್ ಕೂಡ ಅಂಟಿಸಲಾಗಿತ್ತು.ಈ ಕುರಿತು ಕುಮಾರಸ್ವಾಮಿ ಅವರು ಕೂಡ ಟಾಂಗ್ ನೀಡಿದ್ದರು.

lokesh

Recent Posts

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

30 mins ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

49 mins ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

1 hour ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

2 hours ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

3 hours ago