ರಾಜಕೀಯ

ಶೀಘ್ರವೇ ಬಿಡುಗಡೆಯಾಗಲಿದೆ ಪೆನ್ ಡ್ರೈವ್ ಬ್ರದರ್ ಚಿತ್ರ : ಎಚ್.ಡಿ.ಕೆ ವಿರುದ್ಧ ಮತ್ತೊಂದು ಪೋಸ್ಟರ್ ವಾರ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಪೋಸ್ಟರ್ ವಾರ್ ಮುಂದುವರಿದಿದೆ.

ಕರೆಂಟ್ ಕಳ್ಳ ಖ್ಯಾತಿಯ ಎಚ್.ಡಿ.ಕೆ ನಿರ್ಮಾಣದ ‘ಪೆನ್ ಡ್ರೈವ್ ಬ್ರದರ್’ ಚಿತ್ರ ಬಿಡುಗಡೆಯಾಗಲಿದೆ ಎಂದು ಪೋಸ್ಟರ್ ಅಂಟಿಸುವ ಮೂಲಕ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಕೆಣಕಿದಂತಾಗಿದೆ.

ಬೆಂಗಳೂರಿನ ರಾಜಾಜಿನಗರ ರಸ್ತೆ, ಶಿವಾನಂದ ಸರ್ಕಲ್,ಶೇಷಾದ್ರಿಪುರಂ ರಸ್ತೆ, ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪೆನ್ ಡ್ರೈವ್ ಬ್ರದರ್ ಚಿತ್ರ ಬಿಡುಗಡೆ ಪೋಸ್ಟರ್ ಅಂಟಿಸಲಾಗಿದೆ. ಇದು ಮತ್ತೊಂದು ಪೋಸ್ಟರ್ ವಾರ್ ಗೆ ಮುನ್ನುಡಿ ಬರೆದಿದೆ. ಈ ಪೋಸ್ಟರನ್ನು ಯಾರು ಅಂಟಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಇನ್ನು ಈ ಪೋಸ್ಟರ್ ನಲ್ಲಿ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಶೀಘ್ರವೇ ಬಿಡುಗಡೆಯಾಗಲಿದೆ. *ರಾಧಾ* *ಮಾರ*  * ಬ್ಲೂ ಬಾಯ್ಸ್ * ಚಿತ್ರ ಮಂದಿರಗಳಲ್ಲಿ. 68.000 ರೂ. ವೆಚ್ಚದಲ್ಲಿ ಪ್ರಾಮಾಣಿಕ ಕರೆಂಟ್ ಕಳ್ಳರ ನಿರ್ದೇಶನದಲ್ಲಿ ತಯಾರಾಗಿರುವ ಕರೆಂಟ್ ಕಳ್ಳ ಖ್ಯಾತಿಯ ಎಚ್. ಡಿ.ಕೆ ನಿರ್ಮಾಣದ ‘ಪೆನ್ ಡ್ರೈವ್ ಬ್ರದರ್’

ಬರೀ ಟೀಸರ್ ಗೆ ಇಷ್ಟೊಂದು ಟೆನ್ಶನ್ ಆದ್ರೆ ಹೆಂಗೆ ? ಪಿಚ್ಚರ್ ಇನ್ನೂ ಬಾಕಿ ಇದೆ… ಎಂದು ಬರೆಯಲಾಗಿದೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪ ಅಲಂಕಾರ ಮಾಡಲು ಬೀದಿ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದ ಆರೋಪದಡಿ ಎಫ್ಐಆರ್ ದಾಖಲಾಗಿತ್ತು.

ಇನ್ನು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿ ಕೊಂಡಿದ್ದರ ಕುರಿತು ಕಾಂಗ್ರೆಸ್ ಎಚ್ ಡಿಕೆ ವಿರುದ್ಧ ದೊಡ್ಡಮಟ್ಟದಲ್ಲಿಯೇ ಟಿಕಾ ಪ್ರಹಾರ ಮಾಡಿತ್ತು. ಅಲ್ಲದೇ ಕುಮಾರಸ್ವಾಮಿ ಅವರನ್ನು ಕರೆಂಟ್ ಕಳ್ಳ ಎಂದು ಪೋಸ್ಟರ್ ಕೂಡ ಅಂಟಿಸಲಾಗಿತ್ತು.ಈ ಕುರಿತು ಕುಮಾರಸ್ವಾಮಿ ಅವರು ಕೂಡ ಟಾಂಗ್ ನೀಡಿದ್ದರು.

lokesh

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

9 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

21 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago