ರಾಜಕೀಯ

ಶೀಘ್ರವೇ ಬಿಡುಗಡೆಯಾಗಲಿದೆ ಪೆನ್ ಡ್ರೈವ್ ಬ್ರದರ್ ಚಿತ್ರ : ಎಚ್.ಡಿ.ಕೆ ವಿರುದ್ಧ ಮತ್ತೊಂದು ಪೋಸ್ಟರ್ ವಾರ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಪೋಸ್ಟರ್ ವಾರ್ ಮುಂದುವರಿದಿದೆ.

ಕರೆಂಟ್ ಕಳ್ಳ ಖ್ಯಾತಿಯ ಎಚ್.ಡಿ.ಕೆ ನಿರ್ಮಾಣದ ‘ಪೆನ್ ಡ್ರೈವ್ ಬ್ರದರ್’ ಚಿತ್ರ ಬಿಡುಗಡೆಯಾಗಲಿದೆ ಎಂದು ಪೋಸ್ಟರ್ ಅಂಟಿಸುವ ಮೂಲಕ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಕೆಣಕಿದಂತಾಗಿದೆ.

ಬೆಂಗಳೂರಿನ ರಾಜಾಜಿನಗರ ರಸ್ತೆ, ಶಿವಾನಂದ ಸರ್ಕಲ್,ಶೇಷಾದ್ರಿಪುರಂ ರಸ್ತೆ, ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪೆನ್ ಡ್ರೈವ್ ಬ್ರದರ್ ಚಿತ್ರ ಬಿಡುಗಡೆ ಪೋಸ್ಟರ್ ಅಂಟಿಸಲಾಗಿದೆ. ಇದು ಮತ್ತೊಂದು ಪೋಸ್ಟರ್ ವಾರ್ ಗೆ ಮುನ್ನುಡಿ ಬರೆದಿದೆ. ಈ ಪೋಸ್ಟರನ್ನು ಯಾರು ಅಂಟಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಇನ್ನು ಈ ಪೋಸ್ಟರ್ ನಲ್ಲಿ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಶೀಘ್ರವೇ ಬಿಡುಗಡೆಯಾಗಲಿದೆ. *ರಾಧಾ* *ಮಾರ*  * ಬ್ಲೂ ಬಾಯ್ಸ್ * ಚಿತ್ರ ಮಂದಿರಗಳಲ್ಲಿ. 68.000 ರೂ. ವೆಚ್ಚದಲ್ಲಿ ಪ್ರಾಮಾಣಿಕ ಕರೆಂಟ್ ಕಳ್ಳರ ನಿರ್ದೇಶನದಲ್ಲಿ ತಯಾರಾಗಿರುವ ಕರೆಂಟ್ ಕಳ್ಳ ಖ್ಯಾತಿಯ ಎಚ್. ಡಿ.ಕೆ ನಿರ್ಮಾಣದ ‘ಪೆನ್ ಡ್ರೈವ್ ಬ್ರದರ್’

ಬರೀ ಟೀಸರ್ ಗೆ ಇಷ್ಟೊಂದು ಟೆನ್ಶನ್ ಆದ್ರೆ ಹೆಂಗೆ ? ಪಿಚ್ಚರ್ ಇನ್ನೂ ಬಾಕಿ ಇದೆ… ಎಂದು ಬರೆಯಲಾಗಿದೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪ ಅಲಂಕಾರ ಮಾಡಲು ಬೀದಿ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದ ಆರೋಪದಡಿ ಎಫ್ಐಆರ್ ದಾಖಲಾಗಿತ್ತು.

ಇನ್ನು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿ ಕೊಂಡಿದ್ದರ ಕುರಿತು ಕಾಂಗ್ರೆಸ್ ಎಚ್ ಡಿಕೆ ವಿರುದ್ಧ ದೊಡ್ಡಮಟ್ಟದಲ್ಲಿಯೇ ಟಿಕಾ ಪ್ರಹಾರ ಮಾಡಿತ್ತು. ಅಲ್ಲದೇ ಕುಮಾರಸ್ವಾಮಿ ಅವರನ್ನು ಕರೆಂಟ್ ಕಳ್ಳ ಎಂದು ಪೋಸ್ಟರ್ ಕೂಡ ಅಂಟಿಸಲಾಗಿತ್ತು.ಈ ಕುರಿತು ಕುಮಾರಸ್ವಾಮಿ ಅವರು ಕೂಡ ಟಾಂಗ್ ನೀಡಿದ್ದರು.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago