Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಸಂಸದ ಶ್ರೀನಿವಾಸ ಪ್ರಸಾದ್‌ ವಿರುದ್ದ್‌ ಪೋಸ್ಟರ್‌ ಅಳವಡಿಕೆ : ಮುಗಿಯದ ಪೊಸ್ಟರ್‌ ವಾರ್‌ !

ಚಾಮರಾಜನಗರ : ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ  ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ಮುಂದುವರೆದಿದೆ.

ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್  ಅವರನ್ನು​ ನಿಂದಿಸಿರುವ ಹಾಗೆ ಪೋಸ್ಟರ್​ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಈ ಪೋಸ್ಟ್​ರ್​ನಲ್ಲಿ ‘ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ ಬಿಟ್ಟು ಮನೆಯಲ್ಲಿರಲಿ ಎಂದು ಬರೆಯಲಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಹಿನ್ನಲೆ ಪ್ರಸಾದ್​ ವಿರುದ್ಧ ಕಾಂಗ್ರೆಸ್​ನ ಬಾಲರಾಜ್ ಅವರು ಪೋಸ್ಟರ್​ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಿಜೆಪಿ ದೂರು ನೀಡಿದೆ.

ಮುಗಿಯದ ಪೋಸ್ಟರ್‌ ವಾರ್‌ : ನಾಮಪತ್ರ ಸಲ್ಲಿಕೆ ದಿನ ಚಾಮರಾಜನಗರದ ಗಲ್ಲಿ ಗಲ್ಲಿಯಲ್ಲಿ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಸುನೀಲ್ ಬೋಸ್, ಗೋ ಬ್ಯಾಕ್ ಎಂಬ ಪೋಸ್ಟರ್ ಅಂಟಿಸಲಾಗಿತ್ತು. ಇದೀಗ ಶ್ರೀನಿವಾಸ್‌ ಪ್ರಸಾದ್‌ ಅವರ ಬಗ್ಗೆ ಪೋಸ್ಟ್‌ ಹರಿದಾಡುತ್ತಿದ್ದು ಸಧ್ಯಕ್ಕೆ ಪೊಸ್ಟರ್‌ ವಾರ್‌ ಮುಗಿಯುವ ಹಾಗೆ ಕಾಣುತ್ತಿಲ್ಲ.

 

Tags:
error: Content is protected !!