ಚಾಮರಾಜನಗರ : ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ಮುಂದುವರೆದಿದೆ.
ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ನಿಂದಿಸಿರುವ ಹಾಗೆ ಪೋಸ್ಟರ್ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಪೋಸ್ಟ್ರ್ನಲ್ಲಿ ‘ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ ಬಿಟ್ಟು ಮನೆಯಲ್ಲಿರಲಿ ಎಂದು ಬರೆಯಲಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನಲೆ ಪ್ರಸಾದ್ ವಿರುದ್ಧ ಕಾಂಗ್ರೆಸ್ನ ಬಾಲರಾಜ್ ಅವರು ಪೋಸ್ಟರ್ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಿಜೆಪಿ ದೂರು ನೀಡಿದೆ.
ಮುಗಿಯದ ಪೋಸ್ಟರ್ ವಾರ್ : ನಾಮಪತ್ರ ಸಲ್ಲಿಕೆ ದಿನ ಚಾಮರಾಜನಗರದ ಗಲ್ಲಿ ಗಲ್ಲಿಯಲ್ಲಿ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಸುನೀಲ್ ಬೋಸ್, ಗೋ ಬ್ಯಾಕ್ ಎಂಬ ಪೋಸ್ಟರ್ ಅಂಟಿಸಲಾಗಿತ್ತು. ಇದೀಗ ಶ್ರೀನಿವಾಸ್ ಪ್ರಸಾದ್ ಅವರ ಬಗ್ಗೆ ಪೋಸ್ಟ್ ಹರಿದಾಡುತ್ತಿದ್ದು ಸಧ್ಯಕ್ಕೆ ಪೊಸ್ಟರ್ ವಾರ್ ಮುಗಿಯುವ ಹಾಗೆ ಕಾಣುತ್ತಿಲ್ಲ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…