ರಾಜಕೀಯ

ಪ್ರತಾಪ್ ಸಿಂಹಗೆ ಲೋಕಸಭಾ ಚುನಾವಣೆ ಟಿಕೆಟ್ ಕೈ ತಪ್ಪುತ್ತದೆ ಎಂಬುದು ಊಹಾಪೋಹ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ, ಮಾರ್ಚ್ 10: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ರಾಜಮನೆತನದ ಯದುವೀರ್ ಒಡೆಯರ್ ಅವರನ್ನು ಸ್ಪರ್ಧೆ ಮಾಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ . ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹರವರಿಗೆ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷ ಎರಡು ಬಾರಿ ಗೆದ್ದವರಿಗೂ ಟಿಕೆಟ್ ಕೊಟ್ಟಿದೆ, ಎಂಟು ಸಲ ಗೆದ್ದವರಿಗೂ ಟಿಕೆಟ್ ನೀಡಿದೆ, ಟಿಕೆಟ್ ಘೋಷಣೆ ಬಳಿಕ ವರಿಷ್ಠರು ಸಮಾಧಾನ ಮಾಡುತ್ತಾರೆ, ಉಹಾಪೋಹಗಳಿಗೆ ನಾನು ಉತ್ತರಿಸಲ್ಲ ಎಂದು ಹೇಳಿದರು.

ಹಾವೇರಿ ಲೋಕಸಭಾ ಚುನಾವಣಾ ಕ್ಷೇತ್ರದ ಟಿಕೆಟ್‌ಗಾಗಿ ಪಟ್ಟು ಹಿಡಿದಿರುವ ಬಿಸಿ ಪಾಟೀಲ್‌ ಅವರ ಬಗ್ಗೆ ಮಾತನಾಡಿದ ಅವರು ಮುಂದಿನ ಎರಡು ಮೂರು ದಿನಗಳಲ್ಲಿ ಟಿಕೆಟ್ ಫೈನಲ್ ಆಗಬಹುದು, ಬಿಎಸ್ ಯಡಿಯೂರಪ್ಪ ಹಾಗೂ ನಾವು ದೆಹಲಿಗೆ ಹೋಗಬೇಕಿತ್ತು. ಆದರೆ ಎಲೆಕ್ಷನ್ ಕಮಿಟಿ ಮೀಟಿಂಗ್ ಮುಂದಕ್ಕೆ ಹೋಗಿದೆ .ಈ ವಿಚಾರವಾಗಿ ನಮ್ಮ ಹೈಕಮಾಂಡ್ ನಾಯಕರು ತೀರ್ಮಾನ ಮಾಡಿದ್ದು ಹಾಗೂ ರಾಷ್ಟ್ರೀಯ ನಾಯಕರು ಟಿಕೆಟ್ ತೀರ್ಮಾನದ ನಂತರ ಮೇಲೆ ಎಲ್ಲರ ಜೊತೆ ಮಾತನಾಡಿ ಸಮಾಧಾನ ಮಾಡುತ್ತಾರೆ ಎಂದರು.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago