ಹುಬ್ಬಳ್ಳಿ, ಮಾರ್ಚ್ 10: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ರಾಜಮನೆತನದ ಯದುವೀರ್ ಒಡೆಯರ್ ಅವರನ್ನು ಸ್ಪರ್ಧೆ ಮಾಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ . ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹರವರಿಗೆ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷ ಎರಡು ಬಾರಿ ಗೆದ್ದವರಿಗೂ ಟಿಕೆಟ್ ಕೊಟ್ಟಿದೆ, ಎಂಟು ಸಲ ಗೆದ್ದವರಿಗೂ ಟಿಕೆಟ್ ನೀಡಿದೆ, ಟಿಕೆಟ್ ಘೋಷಣೆ ಬಳಿಕ ವರಿಷ್ಠರು ಸಮಾಧಾನ ಮಾಡುತ್ತಾರೆ, ಉಹಾಪೋಹಗಳಿಗೆ ನಾನು ಉತ್ತರಿಸಲ್ಲ ಎಂದು ಹೇಳಿದರು.
ಹಾವೇರಿ ಲೋಕಸಭಾ ಚುನಾವಣಾ ಕ್ಷೇತ್ರದ ಟಿಕೆಟ್ಗಾಗಿ ಪಟ್ಟು ಹಿಡಿದಿರುವ ಬಿಸಿ ಪಾಟೀಲ್ ಅವರ ಬಗ್ಗೆ ಮಾತನಾಡಿದ ಅವರು ಮುಂದಿನ ಎರಡು ಮೂರು ದಿನಗಳಲ್ಲಿ ಟಿಕೆಟ್ ಫೈನಲ್ ಆಗಬಹುದು, ಬಿಎಸ್ ಯಡಿಯೂರಪ್ಪ ಹಾಗೂ ನಾವು ದೆಹಲಿಗೆ ಹೋಗಬೇಕಿತ್ತು. ಆದರೆ ಎಲೆಕ್ಷನ್ ಕಮಿಟಿ ಮೀಟಿಂಗ್ ಮುಂದಕ್ಕೆ ಹೋಗಿದೆ .ಈ ವಿಚಾರವಾಗಿ ನಮ್ಮ ಹೈಕಮಾಂಡ್ ನಾಯಕರು ತೀರ್ಮಾನ ಮಾಡಿದ್ದು ಹಾಗೂ ರಾಷ್ಟ್ರೀಯ ನಾಯಕರು ಟಿಕೆಟ್ ತೀರ್ಮಾನದ ನಂತರ ಮೇಲೆ ಎಲ್ಲರ ಜೊತೆ ಮಾತನಾಡಿ ಸಮಾಧಾನ ಮಾಡುತ್ತಾರೆ ಎಂದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…