ರಾಜಕೀಯ

ಪ್ರತಾಪ್ ಸಿಂಹಗೆ ಲೋಕಸಭಾ ಚುನಾವಣೆ ಟಿಕೆಟ್ ಕೈ ತಪ್ಪುತ್ತದೆ ಎಂಬುದು ಊಹಾಪೋಹ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ, ಮಾರ್ಚ್ 10: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ರಾಜಮನೆತನದ ಯದುವೀರ್ ಒಡೆಯರ್ ಅವರನ್ನು ಸ್ಪರ್ಧೆ ಮಾಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ . ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹರವರಿಗೆ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷ ಎರಡು ಬಾರಿ ಗೆದ್ದವರಿಗೂ ಟಿಕೆಟ್ ಕೊಟ್ಟಿದೆ, ಎಂಟು ಸಲ ಗೆದ್ದವರಿಗೂ ಟಿಕೆಟ್ ನೀಡಿದೆ, ಟಿಕೆಟ್ ಘೋಷಣೆ ಬಳಿಕ ವರಿಷ್ಠರು ಸಮಾಧಾನ ಮಾಡುತ್ತಾರೆ, ಉಹಾಪೋಹಗಳಿಗೆ ನಾನು ಉತ್ತರಿಸಲ್ಲ ಎಂದು ಹೇಳಿದರು.

ಹಾವೇರಿ ಲೋಕಸಭಾ ಚುನಾವಣಾ ಕ್ಷೇತ್ರದ ಟಿಕೆಟ್‌ಗಾಗಿ ಪಟ್ಟು ಹಿಡಿದಿರುವ ಬಿಸಿ ಪಾಟೀಲ್‌ ಅವರ ಬಗ್ಗೆ ಮಾತನಾಡಿದ ಅವರು ಮುಂದಿನ ಎರಡು ಮೂರು ದಿನಗಳಲ್ಲಿ ಟಿಕೆಟ್ ಫೈನಲ್ ಆಗಬಹುದು, ಬಿಎಸ್ ಯಡಿಯೂರಪ್ಪ ಹಾಗೂ ನಾವು ದೆಹಲಿಗೆ ಹೋಗಬೇಕಿತ್ತು. ಆದರೆ ಎಲೆಕ್ಷನ್ ಕಮಿಟಿ ಮೀಟಿಂಗ್ ಮುಂದಕ್ಕೆ ಹೋಗಿದೆ .ಈ ವಿಚಾರವಾಗಿ ನಮ್ಮ ಹೈಕಮಾಂಡ್ ನಾಯಕರು ತೀರ್ಮಾನ ಮಾಡಿದ್ದು ಹಾಗೂ ರಾಷ್ಟ್ರೀಯ ನಾಯಕರು ಟಿಕೆಟ್ ತೀರ್ಮಾನದ ನಂತರ ಮೇಲೆ ಎಲ್ಲರ ಜೊತೆ ಮಾತನಾಡಿ ಸಮಾಧಾನ ಮಾಡುತ್ತಾರೆ ಎಂದರು.

andolana

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

9 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

9 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

14 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

16 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

18 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

18 hours ago