ರಾಜಕೀಯ

ಪ್ರತಾಪ್ ಸಿಂಹಗೆ ಲೋಕಸಭಾ ಚುನಾವಣೆ ಟಿಕೆಟ್ ಕೈ ತಪ್ಪುತ್ತದೆ ಎಂಬುದು ಊಹಾಪೋಹ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ, ಮಾರ್ಚ್ 10: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ರಾಜಮನೆತನದ ಯದುವೀರ್ ಒಡೆಯರ್ ಅವರನ್ನು ಸ್ಪರ್ಧೆ ಮಾಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ . ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹರವರಿಗೆ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷ ಎರಡು ಬಾರಿ ಗೆದ್ದವರಿಗೂ ಟಿಕೆಟ್ ಕೊಟ್ಟಿದೆ, ಎಂಟು ಸಲ ಗೆದ್ದವರಿಗೂ ಟಿಕೆಟ್ ನೀಡಿದೆ, ಟಿಕೆಟ್ ಘೋಷಣೆ ಬಳಿಕ ವರಿಷ್ಠರು ಸಮಾಧಾನ ಮಾಡುತ್ತಾರೆ, ಉಹಾಪೋಹಗಳಿಗೆ ನಾನು ಉತ್ತರಿಸಲ್ಲ ಎಂದು ಹೇಳಿದರು.

ಹಾವೇರಿ ಲೋಕಸಭಾ ಚುನಾವಣಾ ಕ್ಷೇತ್ರದ ಟಿಕೆಟ್‌ಗಾಗಿ ಪಟ್ಟು ಹಿಡಿದಿರುವ ಬಿಸಿ ಪಾಟೀಲ್‌ ಅವರ ಬಗ್ಗೆ ಮಾತನಾಡಿದ ಅವರು ಮುಂದಿನ ಎರಡು ಮೂರು ದಿನಗಳಲ್ಲಿ ಟಿಕೆಟ್ ಫೈನಲ್ ಆಗಬಹುದು, ಬಿಎಸ್ ಯಡಿಯೂರಪ್ಪ ಹಾಗೂ ನಾವು ದೆಹಲಿಗೆ ಹೋಗಬೇಕಿತ್ತು. ಆದರೆ ಎಲೆಕ್ಷನ್ ಕಮಿಟಿ ಮೀಟಿಂಗ್ ಮುಂದಕ್ಕೆ ಹೋಗಿದೆ .ಈ ವಿಚಾರವಾಗಿ ನಮ್ಮ ಹೈಕಮಾಂಡ್ ನಾಯಕರು ತೀರ್ಮಾನ ಮಾಡಿದ್ದು ಹಾಗೂ ರಾಷ್ಟ್ರೀಯ ನಾಯಕರು ಟಿಕೆಟ್ ತೀರ್ಮಾನದ ನಂತರ ಮೇಲೆ ಎಲ್ಲರ ಜೊತೆ ಮಾತನಾಡಿ ಸಮಾಧಾನ ಮಾಡುತ್ತಾರೆ ಎಂದರು.

andolana

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago