ಮೈಸೂರು : ಸಂಸದ ಪ್ರತಾಪ್ ಸಿಂಹ ಅವರು ಸಂಖ್ಯಾ ಶಾಸ್ತ್ರದ ಪ್ರಕಾರ ತಮ್ಮ ಹೆಸರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ.
ಪ್ರತಾಪ್ ಸಿಂಹ ಅವರು ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದು, Prthap simha ಬದಲಿಗೆ Pratap simmha ಎಂದು ಬದಲಿಸಿಕೊಂಡಿದ್ದಾರೆ.
ಹೆಸರು ಬದಲಾವಣೆಯ ಕುರಿತಾತ ಮಾಹಿತಿಯನ್ನು ಪ್ರತಾಪ್ ಸಿಂಹ ಅಫಿಡೆವಿಟ್ ಮೂಲಕ ಘೋಷಣೆ ಮಾಡಿದ್ದಾರೆ.
ಹಲವಾರು ಜನರು ಜೋತಿಷ್ಯ, ನಾಮಬಲ, ಸಂಖ್ಯಾ ಶಾಸ್ತ್ರವನ್ನು ನಂಬುತ್ತಾರೆ. ಕೆಲವು ರಾಜಕಾರಣೀಗಳು ಹೀಗೆ ತಮ್ಮ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿರುವುದು ಇದೇ ಮೊದಲೇನಲ್ಲ. ಈ ಮುಂಚೆಯೂ ಕೂಡ ಕೆಲವು ರಾಜಕಾರಣಿಗಳು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ Yeddyurappa ಎಂದು ಇದ್ದ ತಮ್ಮ ಹೆಸರನ್ನು Yediyurappa ಎಂದು ಬದಲಾವಣೆ ಮಾಡಿಕೊಂಡಿದ್ದರು.
ಎಂಎಲ್ಸಿ ಎಚ್.ವಿಶ್ವನಾಥ್, ತಮಿಳುನಾಡಿನ ಮಾಜಿ ಸಿಎಂ ಜಯಲಲಿತ, ಸೇರಿದಂತೆ ಹಲವು ರಾಜಕಾರಣಿಗಳು ತಮ್ಮ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದರು. ಇದೀಗ ಆ ಸಾಲಿಗೆ ಸಂಸದ ಪ್ರತಾಪ್ ಸಿಂಹ ಕೂಡ ಸೇರಿಕೊಂಡಿದ್ದಾರೆ.
ಸಂಖ್ಯಾ ಶಾಸ್ತ್ರವು ಜ್ಯೋತಿಷ್ಯದ ಒಂದು ಪ್ರಕಾರವಾಗಿದೆ. ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ವ್ಯವಸ್ಥಿತವಾಗಿ ಕಲೆ ಹಾಕಿದ ಅಂಕಿ ಸಂಖ್ಯೆಗಳ ಬಗ್ಗೆ ವಿಶ್ಲೇಷಣೆ ಕೊಡುವುದನ್ನು ಸಂಖ್ಯಾ ಶಾಸ್ತ್ರ ಎನ್ನಲಾಗುತ್ತದೆ.
ಪ್ರತಿಯೊಂದು ವರ್ಣಮಾಲೆಗೂ ಕೂಡ ಸಂಖ್ಯಾ ಮೌಲ್ಯವನ್ನು ನಿಗಧಿ ಪಡಿಸಲಾಗಿದೆ. ಅವುಗಳನ್ನು ಬಳಸಿಕೊಂಡು ಪದಗಳ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತದೆ.
ಸಂಖ್ಯೆಗಳು ಗ್ರಹಗಳಿಗೆ ಸಂಪರ್ಕ ಹೊಂದಿವೆ ಎನ್ನಲಾಗುತ್ತದೆ. ಪ್ರತಿಯೊಂದು ಸಂಖ್ಯೆಯೂ ಕೂಡ ಆಳುವ ಗ್ರಹವನ್ನು ಹೊಂದಿದೆ. ಅದರ ಮೂಲಕ ಗ್ರಹಗಳನ್ನು ನಿಯಂತ್ರಿಸುತ್ತದೆ. ಗ್ರಹಗಳಿಗೆ ಸಂಖ್ಯಾ ಸಂಬಂಧ ಹಾಗೂ ಸಂಪರ್ಕವು ಸಂಖ್ಯಾ ಶಾಸ್ತ್ರದ ಕೀಲಿಯಾಗಿದೆ.
ಸಂಖ್ಯಾ ಶಾಸ್ತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸಂಖ್ಯಾ ಶಾಸ್ತ್ರವು ಗ್ರೀಕ್, ಈಜಿಪ್ಟ್, ಚೀನಾ, ಬ್ಯಾಬಿಲೋನ್, ಭಾರತ ಸೇರಿದಂದಂತೆ ಅನೇಕ ನಾಗರೀಕತೆಗಳಲ್ಲಿ ಬಳಸಲ್ಪಟ್ಟಿದೆ.
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…
ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…