ರಾಜಕೀಯ

ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡ ಪ್ರತಾಪ್‌ ಸಿಂಹ

ಮೈಸೂರು : ಸಂಸದ ಪ್ರತಾಪ್‌ ಸಿಂಹ ಅವರು ಸಂಖ್ಯಾ ಶಾಸ್ತ್ರದ ಪ್ರಕಾರ ತಮ್ಮ ಹೆಸರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ.

ಪ್ರತಾಪ್‌ ಸಿಂಹ ಅವರು ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದು, Prthap simha ಬದಲಿಗೆ Pratap simmha ಎಂದು ಬದಲಿಸಿಕೊಂಡಿದ್ದಾರೆ.

ಹೆಸರು ಬದಲಾವಣೆಯ ಕುರಿತಾತ ಮಾಹಿತಿಯನ್ನು ಪ್ರತಾಪ್‌ ಸಿಂಹ ಅಫಿಡೆವಿಟ್‌ ಮೂಲಕ ಘೋಷಣೆ ಮಾಡಿದ್ದಾರೆ.

ಹಲವಾರು ಜನರು ಜೋತಿಷ್ಯ, ನಾಮಬಲ, ಸಂಖ್ಯಾ ಶಾಸ್ತ್ರವನ್ನು ನಂಬುತ್ತಾರೆ. ಕೆಲವು ರಾಜಕಾರಣೀಗಳು ಹೀಗೆ ತಮ್ಮ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿರುವುದು ಇದೇ ಮೊದಲೇನಲ್ಲ. ಈ ಮುಂಚೆಯೂ ಕೂಡ ಕೆಲವು ರಾಜಕಾರಣಿಗಳು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಕೂಡ Yeddyurappa ಎಂದು ಇದ್ದ ತಮ್ಮ ಹೆಸರನ್ನು Yediyurappa ಎಂದು ಬದಲಾವಣೆ ಮಾಡಿಕೊಂಡಿದ್ದರು.

ಎಂಎಲ್‌ಸಿ ಎಚ್‌.ವಿಶ್ವನಾಥ್‌, ತಮಿಳುನಾಡಿನ ಮಾಜಿ ಸಿಎಂ ಜಯಲಲಿತ, ಸೇರಿದಂತೆ ಹಲವು ರಾಜಕಾರಣಿಗಳು ತಮ್ಮ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದರು. ಇದೀಗ ಆ ಸಾಲಿಗೆ ಸಂಸದ ಪ್ರತಾಪ್‌ ಸಿಂಹ ಕೂಡ ಸೇರಿಕೊಂಡಿದ್ದಾರೆ.

ಸಂಖ್ಯಾ ಶಾಸ್ತ್ರವು ಜ್ಯೋತಿಷ್ಯದ ಒಂದು ಪ್ರಕಾರವಾಗಿದೆ. ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ವ್ಯವಸ್ಥಿತವಾಗಿ ಕಲೆ ಹಾಕಿದ ಅಂಕಿ ಸಂಖ್ಯೆಗಳ ಬಗ್ಗೆ ವಿಶ್ಲೇಷಣೆ ಕೊಡುವುದನ್ನು ಸಂಖ್ಯಾ ಶಾಸ್ತ್ರ ಎನ್ನಲಾಗುತ್ತದೆ.
ಪ್ರತಿಯೊಂದು ವರ್ಣಮಾಲೆಗೂ ಕೂಡ ಸಂಖ್ಯಾ ಮೌಲ್ಯವನ್ನು ನಿಗಧಿ ಪಡಿಸಲಾಗಿದೆ. ಅವುಗಳನ್ನು ಬಳಸಿಕೊಂಡು ಪದಗಳ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತದೆ.

ಸಂಖ್ಯೆಗಳು ಗ್ರಹಗಳಿಗೆ ಸಂಪರ್ಕ ಹೊಂದಿವೆ ಎನ್ನಲಾಗುತ್ತದೆ. ಪ್ರತಿಯೊಂದು ಸಂಖ್ಯೆಯೂ ಕೂಡ ಆಳುವ ಗ್ರಹವನ್ನು ಹೊಂದಿದೆ. ಅದರ ಮೂಲಕ ಗ್ರಹಗಳನ್ನು ನಿಯಂತ್ರಿಸುತ್ತದೆ. ಗ್ರಹಗಳಿಗೆ ಸಂಖ್ಯಾ ಸಂಬಂಧ ಹಾಗೂ ಸಂಪರ್ಕವು ಸಂಖ್ಯಾ ಶಾಸ್ತ್ರದ ಕೀಲಿಯಾಗಿದೆ.

ಸಂಖ್ಯಾ ಶಾಸ್ತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸಂಖ್ಯಾ ಶಾಸ್ತ್ರವು ಗ್ರೀಕ್‌, ಈಜಿಪ್ಟ್‌, ಚೀನಾ, ಬ್ಯಾಬಿಲೋನ್‌, ಭಾರತ ಸೇರಿದಂದಂತೆ ಅನೇಕ ನಾಗರೀಕತೆಗಳಲ್ಲಿ ಬಳಸಲ್ಪಟ್ಟಿದೆ.

lokesh

Recent Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

36 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

41 mins ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

1 hour ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

1 hour ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

2 hours ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

2 hours ago