ಮೈಸೂರು : ಸಂಸದ ಪ್ರತಾಪ್ ಸಿಂಹ ಅವರು ಸಂಖ್ಯಾ ಶಾಸ್ತ್ರದ ಪ್ರಕಾರ ತಮ್ಮ ಹೆಸರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ.
ಪ್ರತಾಪ್ ಸಿಂಹ ಅವರು ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದು, Prthap simha ಬದಲಿಗೆ Pratap simmha ಎಂದು ಬದಲಿಸಿಕೊಂಡಿದ್ದಾರೆ.
ಹೆಸರು ಬದಲಾವಣೆಯ ಕುರಿತಾತ ಮಾಹಿತಿಯನ್ನು ಪ್ರತಾಪ್ ಸಿಂಹ ಅಫಿಡೆವಿಟ್ ಮೂಲಕ ಘೋಷಣೆ ಮಾಡಿದ್ದಾರೆ.
ಹಲವಾರು ಜನರು ಜೋತಿಷ್ಯ, ನಾಮಬಲ, ಸಂಖ್ಯಾ ಶಾಸ್ತ್ರವನ್ನು ನಂಬುತ್ತಾರೆ. ಕೆಲವು ರಾಜಕಾರಣೀಗಳು ಹೀಗೆ ತಮ್ಮ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿರುವುದು ಇದೇ ಮೊದಲೇನಲ್ಲ. ಈ ಮುಂಚೆಯೂ ಕೂಡ ಕೆಲವು ರಾಜಕಾರಣಿಗಳು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ Yeddyurappa ಎಂದು ಇದ್ದ ತಮ್ಮ ಹೆಸರನ್ನು Yediyurappa ಎಂದು ಬದಲಾವಣೆ ಮಾಡಿಕೊಂಡಿದ್ದರು.
ಎಂಎಲ್ಸಿ ಎಚ್.ವಿಶ್ವನಾಥ್, ತಮಿಳುನಾಡಿನ ಮಾಜಿ ಸಿಎಂ ಜಯಲಲಿತ, ಸೇರಿದಂತೆ ಹಲವು ರಾಜಕಾರಣಿಗಳು ತಮ್ಮ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದರು. ಇದೀಗ ಆ ಸಾಲಿಗೆ ಸಂಸದ ಪ್ರತಾಪ್ ಸಿಂಹ ಕೂಡ ಸೇರಿಕೊಂಡಿದ್ದಾರೆ.
ಸಂಖ್ಯಾ ಶಾಸ್ತ್ರವು ಜ್ಯೋತಿಷ್ಯದ ಒಂದು ಪ್ರಕಾರವಾಗಿದೆ. ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ವ್ಯವಸ್ಥಿತವಾಗಿ ಕಲೆ ಹಾಕಿದ ಅಂಕಿ ಸಂಖ್ಯೆಗಳ ಬಗ್ಗೆ ವಿಶ್ಲೇಷಣೆ ಕೊಡುವುದನ್ನು ಸಂಖ್ಯಾ ಶಾಸ್ತ್ರ ಎನ್ನಲಾಗುತ್ತದೆ.
ಪ್ರತಿಯೊಂದು ವರ್ಣಮಾಲೆಗೂ ಕೂಡ ಸಂಖ್ಯಾ ಮೌಲ್ಯವನ್ನು ನಿಗಧಿ ಪಡಿಸಲಾಗಿದೆ. ಅವುಗಳನ್ನು ಬಳಸಿಕೊಂಡು ಪದಗಳ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತದೆ.
ಸಂಖ್ಯೆಗಳು ಗ್ರಹಗಳಿಗೆ ಸಂಪರ್ಕ ಹೊಂದಿವೆ ಎನ್ನಲಾಗುತ್ತದೆ. ಪ್ರತಿಯೊಂದು ಸಂಖ್ಯೆಯೂ ಕೂಡ ಆಳುವ ಗ್ರಹವನ್ನು ಹೊಂದಿದೆ. ಅದರ ಮೂಲಕ ಗ್ರಹಗಳನ್ನು ನಿಯಂತ್ರಿಸುತ್ತದೆ. ಗ್ರಹಗಳಿಗೆ ಸಂಖ್ಯಾ ಸಂಬಂಧ ಹಾಗೂ ಸಂಪರ್ಕವು ಸಂಖ್ಯಾ ಶಾಸ್ತ್ರದ ಕೀಲಿಯಾಗಿದೆ.
ಸಂಖ್ಯಾ ಶಾಸ್ತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸಂಖ್ಯಾ ಶಾಸ್ತ್ರವು ಗ್ರೀಕ್, ಈಜಿಪ್ಟ್, ಚೀನಾ, ಬ್ಯಾಬಿಲೋನ್, ಭಾರತ ಸೇರಿದಂದಂತೆ ಅನೇಕ ನಾಗರೀಕತೆಗಳಲ್ಲಿ ಬಳಸಲ್ಪಟ್ಟಿದೆ.
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…