ರಾಜಕೀಯ

ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡ ಪ್ರತಾಪ್‌ ಸಿಂಹ

ಮೈಸೂರು : ಸಂಸದ ಪ್ರತಾಪ್‌ ಸಿಂಹ ಅವರು ಸಂಖ್ಯಾ ಶಾಸ್ತ್ರದ ಪ್ರಕಾರ ತಮ್ಮ ಹೆಸರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ.

ಪ್ರತಾಪ್‌ ಸಿಂಹ ಅವರು ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದು, Prthap simha ಬದಲಿಗೆ Pratap simmha ಎಂದು ಬದಲಿಸಿಕೊಂಡಿದ್ದಾರೆ.

ಹೆಸರು ಬದಲಾವಣೆಯ ಕುರಿತಾತ ಮಾಹಿತಿಯನ್ನು ಪ್ರತಾಪ್‌ ಸಿಂಹ ಅಫಿಡೆವಿಟ್‌ ಮೂಲಕ ಘೋಷಣೆ ಮಾಡಿದ್ದಾರೆ.

ಹಲವಾರು ಜನರು ಜೋತಿಷ್ಯ, ನಾಮಬಲ, ಸಂಖ್ಯಾ ಶಾಸ್ತ್ರವನ್ನು ನಂಬುತ್ತಾರೆ. ಕೆಲವು ರಾಜಕಾರಣೀಗಳು ಹೀಗೆ ತಮ್ಮ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿರುವುದು ಇದೇ ಮೊದಲೇನಲ್ಲ. ಈ ಮುಂಚೆಯೂ ಕೂಡ ಕೆಲವು ರಾಜಕಾರಣಿಗಳು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಕೂಡ Yeddyurappa ಎಂದು ಇದ್ದ ತಮ್ಮ ಹೆಸರನ್ನು Yediyurappa ಎಂದು ಬದಲಾವಣೆ ಮಾಡಿಕೊಂಡಿದ್ದರು.

ಎಂಎಲ್‌ಸಿ ಎಚ್‌.ವಿಶ್ವನಾಥ್‌, ತಮಿಳುನಾಡಿನ ಮಾಜಿ ಸಿಎಂ ಜಯಲಲಿತ, ಸೇರಿದಂತೆ ಹಲವು ರಾಜಕಾರಣಿಗಳು ತಮ್ಮ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದರು. ಇದೀಗ ಆ ಸಾಲಿಗೆ ಸಂಸದ ಪ್ರತಾಪ್‌ ಸಿಂಹ ಕೂಡ ಸೇರಿಕೊಂಡಿದ್ದಾರೆ.

ಸಂಖ್ಯಾ ಶಾಸ್ತ್ರವು ಜ್ಯೋತಿಷ್ಯದ ಒಂದು ಪ್ರಕಾರವಾಗಿದೆ. ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ವ್ಯವಸ್ಥಿತವಾಗಿ ಕಲೆ ಹಾಕಿದ ಅಂಕಿ ಸಂಖ್ಯೆಗಳ ಬಗ್ಗೆ ವಿಶ್ಲೇಷಣೆ ಕೊಡುವುದನ್ನು ಸಂಖ್ಯಾ ಶಾಸ್ತ್ರ ಎನ್ನಲಾಗುತ್ತದೆ.
ಪ್ರತಿಯೊಂದು ವರ್ಣಮಾಲೆಗೂ ಕೂಡ ಸಂಖ್ಯಾ ಮೌಲ್ಯವನ್ನು ನಿಗಧಿ ಪಡಿಸಲಾಗಿದೆ. ಅವುಗಳನ್ನು ಬಳಸಿಕೊಂಡು ಪದಗಳ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತದೆ.

ಸಂಖ್ಯೆಗಳು ಗ್ರಹಗಳಿಗೆ ಸಂಪರ್ಕ ಹೊಂದಿವೆ ಎನ್ನಲಾಗುತ್ತದೆ. ಪ್ರತಿಯೊಂದು ಸಂಖ್ಯೆಯೂ ಕೂಡ ಆಳುವ ಗ್ರಹವನ್ನು ಹೊಂದಿದೆ. ಅದರ ಮೂಲಕ ಗ್ರಹಗಳನ್ನು ನಿಯಂತ್ರಿಸುತ್ತದೆ. ಗ್ರಹಗಳಿಗೆ ಸಂಖ್ಯಾ ಸಂಬಂಧ ಹಾಗೂ ಸಂಪರ್ಕವು ಸಂಖ್ಯಾ ಶಾಸ್ತ್ರದ ಕೀಲಿಯಾಗಿದೆ.

ಸಂಖ್ಯಾ ಶಾಸ್ತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸಂಖ್ಯಾ ಶಾಸ್ತ್ರವು ಗ್ರೀಕ್‌, ಈಜಿಪ್ಟ್‌, ಚೀನಾ, ಬ್ಯಾಬಿಲೋನ್‌, ಭಾರತ ಸೇರಿದಂದಂತೆ ಅನೇಕ ನಾಗರೀಕತೆಗಳಲ್ಲಿ ಬಳಸಲ್ಪಟ್ಟಿದೆ.

lokesh

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago