ರಾಜಕೀಯ

ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡ ಪ್ರತಾಪ್‌ ಸಿಂಹ

ಮೈಸೂರು : ಸಂಸದ ಪ್ರತಾಪ್‌ ಸಿಂಹ ಅವರು ಸಂಖ್ಯಾ ಶಾಸ್ತ್ರದ ಪ್ರಕಾರ ತಮ್ಮ ಹೆಸರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ.

ಪ್ರತಾಪ್‌ ಸಿಂಹ ಅವರು ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದು, Prthap simha ಬದಲಿಗೆ Pratap simmha ಎಂದು ಬದಲಿಸಿಕೊಂಡಿದ್ದಾರೆ.

ಹೆಸರು ಬದಲಾವಣೆಯ ಕುರಿತಾತ ಮಾಹಿತಿಯನ್ನು ಪ್ರತಾಪ್‌ ಸಿಂಹ ಅಫಿಡೆವಿಟ್‌ ಮೂಲಕ ಘೋಷಣೆ ಮಾಡಿದ್ದಾರೆ.

ಹಲವಾರು ಜನರು ಜೋತಿಷ್ಯ, ನಾಮಬಲ, ಸಂಖ್ಯಾ ಶಾಸ್ತ್ರವನ್ನು ನಂಬುತ್ತಾರೆ. ಕೆಲವು ರಾಜಕಾರಣೀಗಳು ಹೀಗೆ ತಮ್ಮ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿರುವುದು ಇದೇ ಮೊದಲೇನಲ್ಲ. ಈ ಮುಂಚೆಯೂ ಕೂಡ ಕೆಲವು ರಾಜಕಾರಣಿಗಳು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಕೂಡ Yeddyurappa ಎಂದು ಇದ್ದ ತಮ್ಮ ಹೆಸರನ್ನು Yediyurappa ಎಂದು ಬದಲಾವಣೆ ಮಾಡಿಕೊಂಡಿದ್ದರು.

ಎಂಎಲ್‌ಸಿ ಎಚ್‌.ವಿಶ್ವನಾಥ್‌, ತಮಿಳುನಾಡಿನ ಮಾಜಿ ಸಿಎಂ ಜಯಲಲಿತ, ಸೇರಿದಂತೆ ಹಲವು ರಾಜಕಾರಣಿಗಳು ತಮ್ಮ ಹೆಸರಿನಲ್ಲಿ ಅಲ್ಪ ಬದಲಾವಣೆ ಮಾಡಿಕೊಂಡಿದ್ದರು. ಇದೀಗ ಆ ಸಾಲಿಗೆ ಸಂಸದ ಪ್ರತಾಪ್‌ ಸಿಂಹ ಕೂಡ ಸೇರಿಕೊಂಡಿದ್ದಾರೆ.

ಸಂಖ್ಯಾ ಶಾಸ್ತ್ರವು ಜ್ಯೋತಿಷ್ಯದ ಒಂದು ಪ್ರಕಾರವಾಗಿದೆ. ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ವ್ಯವಸ್ಥಿತವಾಗಿ ಕಲೆ ಹಾಕಿದ ಅಂಕಿ ಸಂಖ್ಯೆಗಳ ಬಗ್ಗೆ ವಿಶ್ಲೇಷಣೆ ಕೊಡುವುದನ್ನು ಸಂಖ್ಯಾ ಶಾಸ್ತ್ರ ಎನ್ನಲಾಗುತ್ತದೆ.
ಪ್ರತಿಯೊಂದು ವರ್ಣಮಾಲೆಗೂ ಕೂಡ ಸಂಖ್ಯಾ ಮೌಲ್ಯವನ್ನು ನಿಗಧಿ ಪಡಿಸಲಾಗಿದೆ. ಅವುಗಳನ್ನು ಬಳಸಿಕೊಂಡು ಪದಗಳ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತದೆ.

ಸಂಖ್ಯೆಗಳು ಗ್ರಹಗಳಿಗೆ ಸಂಪರ್ಕ ಹೊಂದಿವೆ ಎನ್ನಲಾಗುತ್ತದೆ. ಪ್ರತಿಯೊಂದು ಸಂಖ್ಯೆಯೂ ಕೂಡ ಆಳುವ ಗ್ರಹವನ್ನು ಹೊಂದಿದೆ. ಅದರ ಮೂಲಕ ಗ್ರಹಗಳನ್ನು ನಿಯಂತ್ರಿಸುತ್ತದೆ. ಗ್ರಹಗಳಿಗೆ ಸಂಖ್ಯಾ ಸಂಬಂಧ ಹಾಗೂ ಸಂಪರ್ಕವು ಸಂಖ್ಯಾ ಶಾಸ್ತ್ರದ ಕೀಲಿಯಾಗಿದೆ.

ಸಂಖ್ಯಾ ಶಾಸ್ತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸಂಖ್ಯಾ ಶಾಸ್ತ್ರವು ಗ್ರೀಕ್‌, ಈಜಿಪ್ಟ್‌, ಚೀನಾ, ಬ್ಯಾಬಿಲೋನ್‌, ಭಾರತ ಸೇರಿದಂದಂತೆ ಅನೇಕ ನಾಗರೀಕತೆಗಳಲ್ಲಿ ಬಳಸಲ್ಪಟ್ಟಿದೆ.

lokesh

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

14 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

15 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

15 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

20 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

21 hours ago