ಬೆಳಗಾವಿ : ರಮೇಶ್ ಜಾರಕಿಹೊಳಿ ಆಪ್ತ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ರಾಜಕೀಯ ಪ್ರೇರಿತವೋ ಅಥವಾ ಶಡ್ಯಂತ್ರವೋ ಗೊತ್ತಾಗಬೇಕು. ಆತ ಮೋಸ್ಟ್ ಬೋಗಸ್ ಎಂದಿದ್ದಾರೆ.
ನಮ್ಮ ಕುಟುಂಬದವರೆಲ್ಲರೂ ಶಾಂತಿ ಪ್ರಿಯರು. ಎಸ್ ಪಿ ಜೊತೆ ಮಾತನಾಡಿದ್ದೇನೆ. ಚಾಕು ಇರಿತದ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕಿದೆ. ಆತ ಯಾರ ಆಪ್ತ ಎನ್ನುವುದಕ್ಕಿಂತ ನಮ್ಮ ಹೆಸರು ಬಂದಿದೆ ಈ ಬಗ್ಗೆ ವಿಚಾರ ಮಾಡಿದ್ದೇನೆ. ಪೃಥ್ವಿ ಸಿಂಗ್ ನನ್ನೇ ವಿಚಾರಣೆ ಮಾಡಬೇಕು. ಆತನ ಹೆಸರು ಬರೆದಿಟ್ಟು ಹುಡುಗರು ಆತ್ಮಹತ್ಯೆ ಮಾಡಿಕೊಂಡಿದ್ದರು 24 ಗಂಟೆಯೊಳಗೆ ಪ್ರಕರಣದ ಸತ್ಯಾಸತ್ಯತೆ ಗೊತ್ತಾಗಬೇಕು ಎಂದಿದ್ದಾರೆ.
ನೆನ್ನೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಬೆಳಗಾವಿಯ ಜಯನಗರದ ನಿವಾಸದ ಬಳಿ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿತ್ತು.ಇದರಿಂದ ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿದ್ದವು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಆಪ್ತರಾದ ಸುಜಯ್ ಮತ್ತು ಚನ್ನರಾಜ ಅವರ ಬಾಡಿಗಾರ್ಡ್ ಪೃಥ್ವಿ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪೃಥ್ವಿ ಸಿಂಗ್ ಜೊತೆ ಚನ್ನರಾಜ ಹಟ್ಟಿಹೊಳಿ ಆಪ್ತರು ಮಾತನಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…