ರಾಜಕೀಯ

ರಾಮಮಂದಿರ ಉದ್ಘಾಟನೆ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮ: ರಾಹುಲ್‌ ಗಾಂಧಿ

ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಮಂತ್ರಣವನ್ನು ನೀಡಲು ಆರಂಭಿಸಲಾಗಿದ್ದು, ಕಾಂಗ್ರೆಸ್‌ ಪಕ್ಷ ಈ ಕಾರ್ಯಕ್ರಮಕ್ಕೆ ತೆರಳದಿರಲು ನಿರ್ಧರಿಸಿದೆ.

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಬಿಜೆಪಿ ಪಕ್ಷದ ರಾಜಕೀಯ ಕಾರ್ಯಕ್ರಮ ಎಂದು ದೂಡಿರುವ ಕಾಂಗ್ರೆಸ್‌ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿತ್ತು. ಇದೀಗ ರಾಹುಲ್‌ ಗಾಂಧಿ ಇಂದು ( ಜನವರಿ 16 ) ನಾಗಲ್ಯಾಂಡ್‌ನ ರಾಜಧಾನಿ ಕೊಹಿಮಾದಲ್ಲಿ ನಡೆದ ಭಾರತ್‌ ಜೋಡ್‌ ನ್ಯಾಯ್‌ ಯಾತ್ರೆಯ ಸಂದರ್ಭದಲ್ಲಿಯೂ ಇದೇ ಹೇಳಿಕೆಯನ್ನು ನೀಡಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಜನವರಿ 22ರ ಕಾರ್ಯಕ್ರಮವನ್ನು ಪೂರ್ಣವಾಗಿ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿವೆ ಎಂದು ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಇದು ಆರ್‌ಎಸ್‌ಎಸ್‌ ಬಿಜೆಪಿ ಕಾರ್ಯಕ್ರಮವಾಗಿದ್ದು, ಕಾಂಗ್ರೆಸ್‌ನ ಅಧ್ಯಕ್ಷರು ಈ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದರು.

ಹಿಂದೂ ಧರ್ಮದ ವರಿಷ್ಠರು, ಹಿಂದೂ ಧರ್ಮದ ಮಠಾಧಿಪತಿಗಳೂ ಸಹ ಈ ಕಾರ್ಯವನ್ನು ರಾಜಕೀಯ ಕಾರ್ಯ ಎಂದು ಸಾರ್ವಜನಿಕವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಹೀಗಾಗಿ ಭಾರತದ ಪ್ರಧಾನಿ ಹಾಗೂ ಆರ್‌ಎಸ್‌ಎಸ್‌ ಸುತ್ತ ವಿನ್ಯಾಸಗೊಳಿಸಲಾದ ಕಾರ್ಯಕ್ರಮಕ್ಕೆ ಹೋಗುವುದು ನನಗೆ ಸರಿ ಎನಿಸುವುದಿಲ್ಲ ಎಂದೂ ಸಹ ರಾಹುಲ್‌ ಗಾಂಧಿ ತಿಳಿಸಿದರು.

andolana

Recent Posts

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

29 mins ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

58 mins ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

1 hour ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

1 hour ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

7 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

7 hours ago