ರಾಜಕೀಯ

ರಾಮಮಂದಿರ ಉದ್ಘಾಟನೆ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮ: ರಾಹುಲ್‌ ಗಾಂಧಿ

ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಮಂತ್ರಣವನ್ನು ನೀಡಲು ಆರಂಭಿಸಲಾಗಿದ್ದು, ಕಾಂಗ್ರೆಸ್‌ ಪಕ್ಷ ಈ ಕಾರ್ಯಕ್ರಮಕ್ಕೆ ತೆರಳದಿರಲು ನಿರ್ಧರಿಸಿದೆ.

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಬಿಜೆಪಿ ಪಕ್ಷದ ರಾಜಕೀಯ ಕಾರ್ಯಕ್ರಮ ಎಂದು ದೂಡಿರುವ ಕಾಂಗ್ರೆಸ್‌ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿತ್ತು. ಇದೀಗ ರಾಹುಲ್‌ ಗಾಂಧಿ ಇಂದು ( ಜನವರಿ 16 ) ನಾಗಲ್ಯಾಂಡ್‌ನ ರಾಜಧಾನಿ ಕೊಹಿಮಾದಲ್ಲಿ ನಡೆದ ಭಾರತ್‌ ಜೋಡ್‌ ನ್ಯಾಯ್‌ ಯಾತ್ರೆಯ ಸಂದರ್ಭದಲ್ಲಿಯೂ ಇದೇ ಹೇಳಿಕೆಯನ್ನು ನೀಡಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಜನವರಿ 22ರ ಕಾರ್ಯಕ್ರಮವನ್ನು ಪೂರ್ಣವಾಗಿ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿವೆ ಎಂದು ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಇದು ಆರ್‌ಎಸ್‌ಎಸ್‌ ಬಿಜೆಪಿ ಕಾರ್ಯಕ್ರಮವಾಗಿದ್ದು, ಕಾಂಗ್ರೆಸ್‌ನ ಅಧ್ಯಕ್ಷರು ಈ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದರು.

ಹಿಂದೂ ಧರ್ಮದ ವರಿಷ್ಠರು, ಹಿಂದೂ ಧರ್ಮದ ಮಠಾಧಿಪತಿಗಳೂ ಸಹ ಈ ಕಾರ್ಯವನ್ನು ರಾಜಕೀಯ ಕಾರ್ಯ ಎಂದು ಸಾರ್ವಜನಿಕವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಹೀಗಾಗಿ ಭಾರತದ ಪ್ರಧಾನಿ ಹಾಗೂ ಆರ್‌ಎಸ್‌ಎಸ್‌ ಸುತ್ತ ವಿನ್ಯಾಸಗೊಳಿಸಲಾದ ಕಾರ್ಯಕ್ರಮಕ್ಕೆ ಹೋಗುವುದು ನನಗೆ ಸರಿ ಎನಿಸುವುದಿಲ್ಲ ಎಂದೂ ಸಹ ರಾಹುಲ್‌ ಗಾಂಧಿ ತಿಳಿಸಿದರು.

andolana

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

8 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

8 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

8 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

9 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

10 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

18 hours ago